Featured

BIG BREAKING NEWS ಡಿಸೆಂಬರ್ 27 ಕಾಪು ಪುರಸಭಾ ಚುನಾವಣೆ ದಿನಾಂಕ ಘೋಷಣೆ : vishwanews24

BIG BREAKING NEWS ಡಿಸೆಂಬರ್ 27 ಕಾಪು ಪುರಸಭಾ ಚುನಾವಣೆ ದಿನಾಂಕ ಘೋಷಣೆ : vishwanews24

ಕಾಪು: ಸದ್ಯ ರಾಜ್ಯದಲ್ಲಿ ವಿಧಾನಪರಿಷತ್‌ ಚುನಾವಣೆ (MLC Election) ಕಾವು ರಂಗೇರಿದೆ. ಇದರ ಮಧ್ಯೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಗೆ ಚುನಾವಣೆ ದಿನಾಂಕ
ಘೋಷಣೆಯಾಗಿದೆ.

ಅವಧಿ ಮುಕ್ತಾಯಗೊಂಡ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ (Local Body Elections) ದಿನಾಂಕವನ್ನು ರಾಜ್ಯ ಆಯೋಗ ಚುನಾವಣೆ (Karnataka Election Commission) ಘೋಷಣೆ ಮಾಡಿದೆ. 4 ನಗರಸಭೆ, 19 ಪುರಸಭೆ, 35 ಪ.ಪಂ.ಗೆ ಡಿ. 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ.

ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 386 ಸ್ಥಾನಗಳಿಗೂ ಉಪಚುನಾವಣೆ ನಡೆಯಲಿದೆ.  ಡಿಸೆಂಬರ್ 13 ರಿಂದ ನೀತಿಸಂಹಿತೆ ಜಾರಿಯಾಗಲಿದೆ.

ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ಪಾಲನೆ ಮಾಡಿ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಡಿಸೆಂಬರ್ 27ರಂದು ಅಥಣಿ, ಅಣ್ಣಿಗೇರಿ, ಬಂಕಾಪುರ, ಜಿಗಣಿ, ಚಂದಾಪುರ, ಬಿಡದಿ, ಮಲೆಬೆನ್ನೂರು, ಕಾಪು, ಹಾರೋಗೇರಿ, ಮುಗಳಖೋಡ, ಮುನವಳ್ಳಿ, ಉಗಾರಖುರ್ದ, ಕಾರಟಗಿ, ಕುರೆಕುಪ್ಪ, ಕುರುಗೋಡು, ಹಗರಿಬೊಮ್ಮನಹಳ್ಳಿ, ಮಸ್ಕಿ, ಕೆಂಭಾವಿ, ಕಕ್ಕೇರಾ ಪುರಸಭೆಗಳಿಗೆ ಮತದಾನ ನಡೆಯಲಿದೆ. ಡಿ. 27ರಂದು 35 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

ಅವು ನಾಯಕನಹಟ್ಟಿ, ವಿಟ್ಲ, ಕೋಟೆಕಾರು, ಎಂ.ಕೆ.ಹುಬ್ಬಳ್ಳಿ, ಕಂಕನವಾಡಿ, ನಾಗನೂರ, ಯಕ್ಸಾಂಬಾ, ಕಿತ್ತೂರು, ಅರಭಾವಿ, ಐನಾಪುರ, ಶೇಡಬಾಳ, ಚಿಂಚಿಲಿ, ಬೋರಗಾಂವ್, ಕಲ್ಲೋಳಿ, ನಲತವಾಡ, ನಿಡಗುಂದಿ, ದೇವರಹಿಪ್ಪರಗಿ, ಅಲಮೇಲ, ಮನಗೂಳಿ, ಕೊಲ್ಹಾರ, ಕಮತಗಿ, ಬೆಳಗಲಿ, ಅಮೀನಗಡ, ಗುತ್ತಲ, ಜಾಲಿ, ತಾವರಗೇರಾ, ಕುಕನೂರ, ಭಾಗ್ಯನಗರ, ಕನಕಗಿರಿ, ಮರಿಯಮ್ಮನಹಳ್ಳಿ, ಕವಿತಾಳ, ತುರವಿಹಾಳ, ಬಳಗಾನೂರು, ಸಿರವಾರ ಪಟ್ಟಣ ಪಂಚಾಯಿತಿಗೆ ಮತದಾನ ನಡೆಯಲಿದೆ.  ಸ್ಥಳೀಯ ಸಂಸ್ಥೆ ಚುನಾವಣೆ ದಿನಾಂಕಡಿಸೆಂಬರ್ 13 ಚುನಾವಣಾ ಅಧಿಸೂಚನೆಡಿಸೆಂಬರ್ 17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಡಿಸೆಂಬರ್ 27 ಮತದಾನಡಿಸೆಂಬರ್ 30 ಫಲಿತಾಂಶ ಬರಲಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

9 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

10 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

10 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

11 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

11 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

11 hours ago