BIG BREAKING NEWS :ದಕ್ಷಿಣ ಕನ್ನಡದಲ್ಲಿ ಕೊರೋನ ಗೆ ಮೊದಲ ಬಲಿ – ಬಂಟ್ವಾಳ ಮೂಲದ ಮಹಿಳೆ ಸಾವು VISHWANEWS24

ದಕ್ಷಿಣ ಕನ್ನಡದಲ್ಲಿ ಕೊರೋನಗೆ ಮೊದಲ ಬಲಿ – ಬಂಟ್ವಾಳ ಮೂಲದ ಮಹಿಳೆ ಸಾವು

ಮಂಗಳೂರು: ಮಹಾ ಮಾರಿ ಕೊರೋನಾ ವೈರಸ್ ದಕ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದ್ದು ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಸುಮಾರು 50 ವರ್ಷ ಪ್ರಾಯದ ಮಹಿಳೆಯ ರವಿವಾರ ಜಿಲ್ಲೆಯ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನ ವೈರಸ್ ಸೋಂಕಿಗೆ ಮೃತಪಟ್ಟಿದ್ದಾರೆ.

ಬಂಟ್ವಾಳ ಕಸ್ಪಾ ನಿವಾಸಿ 50 ವರ್ಷದ ಮಹಿಳೆಯು ಏಪ್ರಿಲ್ 18 ರಂದು ತೀವ್ರ ಶ್ವಾಸಕೋಶದ ತೊಂದರೆ ಇರುವುದಾಗಿ ತುರ್ತು ಚಿಕಿತ್ಸೆಗೆ ವನ್ಹಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ಇವರನ್ನು ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ಆರಂಭಿಸಲಾಗಿರುತ್ತದೆ.

ಸದ್ರಿ ರೋಗಿಗೆ ತೀವ್ರ ಉಸಿರಾಟದ ತೊಂದರೆ ಇರುವುದರಿಂದ, ಕೋವಿಡ್-19ರ ಪರೀಕ್ಷೆಗಾಗಿ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ವೆನ್ಲಾಕ್ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿರುತ್ತಾರೆ.

ಪರೀಕ್ಷಾ ವರದಿ ನಿರೀಕ್ಷೆಯಲ್ಲಿರುವಾಗಲೇ, ರೋಗಿಯು ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಬೆಳಿಗ್ಗೆ 9-15 ಗಂಟೆಗೆ ನಿಧನ ಹೊಂದಿರುತ್ತಾರೆ. ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿಯು ಅಪರಾಹ್ನ ಸ್ವೀಕೃತವಾಗಿದ್ದು, ಸದರಿ ರೋಗಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿರುತ್ತದೆ.

ರೋಗಿಗೆ ಕೋವಿಡ್-19 ದೃಢಪಟ್ಟಿರುವ ಹಿನ್ನಲೆಯಲ್ಲಿ ಇವರ ಶವ ಸಂಸ್ಕಾರವನ್ನು ವೈದ್ಯಕೀಯ ಶಿಷ್ಠಾಚಾರದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡದ ನೇತೃತ್ವದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಈಗಾಗಲೆ 13 ಕೊರೋನ ಸೋಂಕಿತರ ಪೈಕಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಓರ್ವ ಚಿಕಿತ್ಸೆ ಪಡೆಯುತ್ತಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

13 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

13 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago