ಉಡುಪಿ

BIG BREAKING NEWS : ಪಾದೂರು ಗ್ರಾಮದ ISPRL 2ನೇ ಹಂತದ ಯೋಜನೆಯ KIADB ರವರ JMC ಸರ್ವೇಗೆ ಸ್ಥಳೀಯರಿಂದ ತಡೆ:-VISHWANEWS24

ಪಾದೂರು ಗ್ರಾಮದ ISPRL 2ನೇ ಹಂತದ ಯೋಜನೆಯ KIADB ರವರ JMC ಸರ್ವೇಗೆ ಸ್ಥಳೀಯರಿಂದ ತಡೆ:vishwanews24

ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದ ISPRL ಯೋಜನೆಯ 2 ನೇ ಹಂತದ
ಯೋಜನೆಯ 210 ಎಕ್ರೆ ಭೂಸ್ವಾಧೀನ ಪ್ರಕ್ರಿಯೆ ಹಲವು ತಿಂಗಳ ಹಿಂದೆ ಆರಂಭಗೊಂಡಿದ್ದು, ಈ ಬಗ್ಗೆ ಭೂಸಂತ್ರಸ್ತರು
ಪಾದೂರು ಗ್ರಾಮದ ಭೂಮಿಯ ಮೌಲ್ಯ ಕಡಿಮೆ ಇರುವುದರಿಂದ ಪಕ್ಕದ ಗ್ರಾಮದ ಭೂಮಿಯ ಮೌಲ್ಯವನ್ನು
ಪರಿಗಣಿಸಿ JMC ಸರ್ವೇಗಿಂತ ಮೊದಲು ಜಾಗದ ಮೌಲ್ಯವನ್ನು ನಿಗದಿಪಡಿಸಿದ ನಂತರ JMC ಸರ್ವೇ
ನಡೆಸಬೇಕೆಂದು ಆಗ್ರಹಿಸುತ್ತಿದ್ದು, ಈ ಬಗ್ಗೆ ಈಗಾಗಲೇ ಶಾಸಕರಾದ ಮಾನ್ಯ ಲಾಲಾಜಿ ಆರ್ ಮೆಂಡನ್, ಕೇಂದ್ರ
ಸಚಿವರಾದ ಮಾನ್ಯ ಶೋಭಾ ಕರಂದ್ಲಾಜೆ , ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ರೀಮತಿ ಶ್ಯಾಮಲ
ಕುಂದರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಿಲ್ಪಾ ಜಿ ಸುವರ್ಣ, ತಾಲೂಕು ಪಂಚಾಯತ್ ಮಾಜಿ
ಅಧ್ಯಕ್ಷರಾದ ಶಶಿಪ್ರಭಾ ಶೆಟ್ಟಿ, ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಜನಜಾಗೃತಿ ಮತ್ತು ಜನಹಿತ ಸಮಿತಿ
ಹಲವಾರು ಬಾರಿ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ಮತ್ತು ಮನವಿಗಳನ್ನು ನೀಡಿದ್ದು, ಜಿಲ್ಲಾಧಿಕಾರಿಗಳು ಈ ಬಗ್ಗೆ
ವಿಶೇಷ ಸಭೆ ನಡೆಸುವ ಬಗ್ಗೆ ಭರವಸೆ ನೀಡಿರುತ್ತಾರೆ. ಆದರೆ ಇವತ್ತು KIADB ಅಧಿಕಾರಿಗಳು ಏಕಾಏಕಿ ಗ್ರಾಮ
ಪಂಚಾಯತ್ ಗೂ ಹಾಗೂ ಪೋಲಿಸ್ ಠಾಣೆಗೂ ಯಾವುದೇ ಮಾಹಿತಿಯನ್ನು ನೀಡದೆ ಸರ್ವೇ ಕಾರ್ಯ ಆರಂಭಿಸಿದ್ದನ್ನು
ಕಂಡ ಸಿಟ್ಟಾದ ಗ್ರಾಮಸ್ಥರು ಸರ್ವೆ ಕಾರ್ಯಕ್ಕೆ ತಡೆಯೊಡ್ಡಿ KIADB ಅಧಿಕಾರಿಗಳನ್ನು ವಾಪಾಸು ಕಳಿಸಿರುವ ಘಟನೆ
ನಡೆದಿದೆ. ಈ ಸಂದರ್ಭದಲ್ಲಿ ಮಜೂರು ಗ್ರಾ.ಪಂ ಉಪಾಧ್ಯಕ್ಷರಾದ ಶ್ರೀ ಮಧುಸೂಧನ್ ಸಾಲ್ಯಾನ್ , ಮಜೂರು
ಗ್ರಾ.ಪಂ ಸದಸ್ಯರಾದ ಶ್ರೀ ಸಂದೀಪ್ ರಾವ್ , ಶ್ರೀ ಪ್ರಸಾದ್ ಶೆಟ್ಟಿ ವಳದೂರು, ಜನಹಿತ
ಸಮಿತಿ ಅಧ್ಯಕ್ಷರಾದ ಶ್ರೀ ಸುರೇಂದ್ರ ಜೈನ್ , ಸದಸ್ಯರಾದ ಮೇವಿಸ್ ಕೋರ್ಡ , ಮೇಬುಲ್ ಕೋರ್ಡ, ಪ್ರಶಾಂತ್
ರಾವ್, ರಾಘವೇಂದ್ರ ಆಚಾರ್ಯ , ರಿಚ್ಚರ್ಡ್ ಕೋರ್ಡ ಮುಂತಾದ ಸ್ಥಳೀಯರು ಹಾಗೂ ಭೂ ಸಂತ್ರಸ್ತರು
ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago