ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದ ISPRL ಯೋಜನೆಯ 2 ನೇ ಹಂತದ
ಯೋಜನೆಯ 210 ಎಕ್ರೆ ಭೂಸ್ವಾಧೀನ ಪ್ರಕ್ರಿಯೆ ಹಲವು ತಿಂಗಳ ಹಿಂದೆ ಆರಂಭಗೊಂಡಿದ್ದು, ಈ ಬಗ್ಗೆ ಭೂಸಂತ್ರಸ್ತರು
ಪಾದೂರು ಗ್ರಾಮದ ಭೂಮಿಯ ಮೌಲ್ಯ ಕಡಿಮೆ ಇರುವುದರಿಂದ ಪಕ್ಕದ ಗ್ರಾಮದ ಭೂಮಿಯ ಮೌಲ್ಯವನ್ನು
ಪರಿಗಣಿಸಿ JMC ಸರ್ವೇಗಿಂತ ಮೊದಲು ಜಾಗದ ಮೌಲ್ಯವನ್ನು ನಿಗದಿಪಡಿಸಿದ ನಂತರ JMC ಸರ್ವೇ
ನಡೆಸಬೇಕೆಂದು ಆಗ್ರಹಿಸುತ್ತಿದ್ದು, ಈ ಬಗ್ಗೆ ಈಗಾಗಲೇ ಶಾಸಕರಾದ ಮಾನ್ಯ ಲಾಲಾಜಿ ಆರ್ ಮೆಂಡನ್, ಕೇಂದ್ರ
ಸಚಿವರಾದ ಮಾನ್ಯ ಶೋಭಾ ಕರಂದ್ಲಾಜೆ , ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ರೀಮತಿ ಶ್ಯಾಮಲ
ಕುಂದರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಿಲ್ಪಾ ಜಿ ಸುವರ್ಣ, ತಾಲೂಕು ಪಂಚಾಯತ್ ಮಾಜಿ
ಅಧ್ಯಕ್ಷರಾದ ಶಶಿಪ್ರಭಾ ಶೆಟ್ಟಿ, ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಜನಜಾಗೃತಿ ಮತ್ತು ಜನಹಿತ ಸಮಿತಿ
ಹಲವಾರು ಬಾರಿ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ಮತ್ತು ಮನವಿಗಳನ್ನು ನೀಡಿದ್ದು, ಜಿಲ್ಲಾಧಿಕಾರಿಗಳು ಈ ಬಗ್ಗೆ
ವಿಶೇಷ ಸಭೆ ನಡೆಸುವ ಬಗ್ಗೆ ಭರವಸೆ ನೀಡಿರುತ್ತಾರೆ. ಆದರೆ ಇವತ್ತು KIADB ಅಧಿಕಾರಿಗಳು ಏಕಾಏಕಿ ಗ್ರಾಮ
ಪಂಚಾಯತ್ ಗೂ ಹಾಗೂ ಪೋಲಿಸ್ ಠಾಣೆಗೂ ಯಾವುದೇ ಮಾಹಿತಿಯನ್ನು ನೀಡದೆ ಸರ್ವೇ ಕಾರ್ಯ ಆರಂಭಿಸಿದ್ದನ್ನು
ಕಂಡ ಸಿಟ್ಟಾದ ಗ್ರಾಮಸ್ಥರು ಸರ್ವೆ ಕಾರ್ಯಕ್ಕೆ ತಡೆಯೊಡ್ಡಿ KIADB ಅಧಿಕಾರಿಗಳನ್ನು ವಾಪಾಸು ಕಳಿಸಿರುವ ಘಟನೆ
ನಡೆದಿದೆ. ಈ ಸಂದರ್ಭದಲ್ಲಿ ಮಜೂರು ಗ್ರಾ.ಪಂ ಉಪಾಧ್ಯಕ್ಷರಾದ ಶ್ರೀ ಮಧುಸೂಧನ್ ಸಾಲ್ಯಾನ್ , ಮಜೂರು
ಗ್ರಾ.ಪಂ ಸದಸ್ಯರಾದ ಶ್ರೀ ಸಂದೀಪ್ ರಾವ್ , ಶ್ರೀ ಪ್ರಸಾದ್ ಶೆಟ್ಟಿ ವಳದೂರು, ಜನಹಿತ
ಸಮಿತಿ ಅಧ್ಯಕ್ಷರಾದ ಶ್ರೀ ಸುರೇಂದ್ರ ಜೈನ್ , ಸದಸ್ಯರಾದ ಮೇವಿಸ್ ಕೋರ್ಡ , ಮೇಬುಲ್ ಕೋರ್ಡ, ಪ್ರಶಾಂತ್
ರಾವ್, ರಾಘವೇಂದ್ರ ಆಚಾರ್ಯ , ರಿಚ್ಚರ್ಡ್ ಕೋರ್ಡ ಮುಂತಾದ ಸ್ಥಳೀಯರು ಹಾಗೂ ಭೂ ಸಂತ್ರಸ್ತರು
ಉಪಸ್ಥಿತರಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…