Featured

BIG MORNING NEWS:- ಉಡುಪಿಗೆ ಎಂಟ್ರಿ ಕೊಟ್ಟೆ ಬಿಡ್ತು ಟೊಮೇಟೊ ಜ್ವರ-ನಾಲ್ಕು ವರ್ಷದ ಮಗುವಿನಲ್ಲಿ ಜ್ವರದ ಶಂಕೆ..?: vishwanews24

ಉಡುಪಿಗೆ ಎಂಟ್ರಿ ಕೊಟ್ಟೆ ಬಿಡ್ತು ಟೊಮೇಟೊ ಜ್ವರ-ನಾಲ್ಕು ವರ್ಷದ ಮಗುವಿನಲ್ಲಿ ಜ್ವರದ ಶಂಕೆ..?

ಉಡುಪಿ : ಕೊರೊನಾ 4ನೇ ಅಲೆಯ ಭೀತಿಯಲ್ಲಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ಆತಂಕ ಶುರುವಾಗಿದೆ.

ಇಂದಿನಿಂದ ಶಾಲೆಗಳು ಪುನರಾರಂಭಗೊಳ್ಳುತ್ತಿದ್ದು, ಈ ಹೊತ್ತಿನಲ್ಲೇ ಟೊಮೆಟೊ ಜ್ವರ ಕಾಣಿಸಿಕೊಂಡಿದೆ. ಕೇರಳದಲ್ಲಿ ಈಚೆಗಷ್ಟೇ ಕಾಣಿಸಿಕೊಂಡ ಟೊಮೆಟೋ ಜ್ವರ ಉಡುಪಿ ಜಿಲ್ಲೆಯಲ್ಲಿ 4 ವರ್ಷದ ಮಗುವಿನಲ್ಲಿ ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ.

ಸದ್ಯ ರಾಜ್ಯದಲ್ಲಿ ಈ ಜ್ವರ ಕಾಣಿಸಿಕೊಂಡಿರುವ ಬಗ್ಗೆ ಆರೋಗ್ಯ ಇಲಾಖೆ ಯಾವುದೇ ಅಧಿಕೃತ ಪ್ರಕಟಣೆ ಬಿಡುಗಡೆಯಾಗಿಲ್ಲ. ಸೋಂಕಿತ ಮಗುವನ್ನು ಐಸಿಯು (ನಿಗಾ ಘಟಕ) ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಪ್ರಕರಣ ಪತ್ತೆಯ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ

ಆರೋಗ್ಯ ಇಲಾಖೆಗೆ ತಲೆನೋವು: ಟೊಮೆಟೊ ಫ್ಲೂ ಆರೋಗ್ಯಾಧಿಕಾರಿಗಳಿಗೆ ತಲೆನೋವು ತರಿಸಿದೆ. ಅದಕ್ಕಾಗಿ ಜ್ವರ ಬಂದವರನ್ನು ಹೇಗೆ ಗುರುತಿಸಬೇಕು? ಹೇಗೆ ಪರೀಕ್ಷೆ ಮಾಡಿಸಬೇಕು? ಎನ್ನುವ ಬಗ್ಗೆ ಇನ್ನೂ ಪ್ರಚಾರ ಕೈಗೊಳ್ಳಬೇಕಿದೆ. ಈ ಬಗ್ಗೆ ಇನ್ನೂ ಆರೋಗ್ಯಾಧಿಕಾರಿಗಳಲ್ಲಿಯೇ ಗೊಂದಲ ಇವೆ. ಕೇರಳದಲ್ಲಿ ಈವರೆಗೆ 50 ಪ್ರಕರಣ ಕಾಣಿಸಿಕೊಂಡಿದೆ.

ಜ್ವರ ಲಕ್ಷಣಗಳೇನು?

 ವಿಪರೀತ ಜ್ವರ, ನಿರ್ಜಲೀಕರಣ, ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು, ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳತ ವಾಕರಿಕೆ, ವಾಂತಿ – ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು ಆಯಾಸ, ದೇಹದಲ್ಲಿ ನೋವು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

14 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

14 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

17 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago