ಬೆಂಗಳೂರು: ಬಿಜೆಪಿ ರಾಜ್ಯಾ ಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಯಶಸ್ವಿಯಾಗಿ ಎರಡು ವರ್ಷ ಪೂರೈ ಸಿದ್ದು, ಇವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುವ ನಿರೀಕ್ಷೆ ಹುಟ್ಟುಹಾಕಿದೆ.
ಎಲ್ಲ ಜಿಲ್ಲೆ ಗಳಿಗೆ ನಿರಂತರ ಪ್ರವಾಸ ಕೈಗೊಂಡು ಪಕ್ಷವನ್ನು ತಳ ಮಟ್ಟದಲ್ಲಿ ಸಂಘಟಿ ಸುವ ಪ್ರಯತ್ನವನ್ನು ನಳಿನ್ 2 ವರ್ಷಗಳಲ್ಲಿ ಮಾಡಿದ್ದರು.
37 ಜಿಲ್ಲಾ ಮಟ್ಟದ ನಿರಂತರ ಕಾರ್ಯಕಾರಿಣಿ, 290 ಮಂಡಲ ಮಟ್ಟದ ಕಾರ್ಯಕಾರಿಣಿ ಮತ್ತು 3 ತಿಂಗಳು ಗಳಿಗೊಮ್ಮೆ ರಾಜ್ಯ ಮಟ್ಟದ ಕಾರ್ಯ ಕಾರಿಣಿಗಳನ್ನು ನಿರಂತರವಾಗಿ ರಾಜ್ಯದ ವಿವಿಧ ಭಾಗ ಗಳಲ್ಲಿ ನಡೆಸಿದ್ದು, ಮತ್ತೂಂದು ಗಮನಾರ್ಹ ನಡೆ. ಇದು ಪಕ್ಷದ ಬೇರುಗಳನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವಲ್ಲಿ ಸಹಾಯಕವಾಯಿತು ಎಂದು ವ್ಯಾಖ್ಯಾನಿಸಲಾಗಿದೆ.
ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಸೂಕ್ತ ಹುದ್ದೆಗಳನ್ನು ಕಲ್ಪಿಸು ವಲ್ಲಿ ಅಧ್ಯಕ್ಷರಾಗಿ ಶ್ರಮಿಸಿದರೆಂಬುದು ನಳಿನ್ ಕುಮಾರ್ ಕಟೀಲು ಬಗೆಗೆ ಪಕ್ಷದಲ್ಲಿ ಸದಭಿಪ್ರಾಯ ಮೂಡುವಂತೆ ಮಾಡಿದೆ.
ಗ್ರಾ.ಪಂ. ಚುನಾವಣೆಯಲ್ಲಿ ಜಯ:
ಗ್ರಾ.ಪಂ. ಚುನಾವಣೆಗಳಲ್ಲಿ ಜಯ ಗಳಿಸಿದ ಕಾರ್ಯಕರ್ತರನ್ನು ಗುರುತಿಸಿ ಅವರನ್ನು ಗೌರವಿಸುವ ಕೆಲಸ ಮಾಡಿದ್ದು, ವಿಧಾನಸಭಾ ಕ್ಷೇತ್ರವಾರು ಗ್ರಾ.ಪಂ. ಸದಸ್ಯರ ಸಮಾವೇಶ ನಡೆಸಿ, ಅವರಲ್ಲಿ ಉತ್ಸಾಹ ತುಂಬಲಾಗಿತ್ತು. ಇದೂ ರಾಜ್ಯಾದ್ಯಂತ ಪಕ್ಷ ಬಲವರ್ಧನೆಗೆ ಸಹಾಯಕವಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಕೊರೊನಾ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರೇ ಆರೋಗ್ಯ ಸ್ವಯಂ ಸೇವಕರಾಗಿ ಗ್ರಾಮೀಣ ಪ್ರದೇಶದ ಪ್ರತೀ ಮನೆಗೂ ಭೇಟಿ ನೀಡಿ, ಆರೋಗ್ಯ ಜಾಗೃತಿ ಮೂಡಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.
ನಳಿನ್ ಅವರ ಯಶಸ್ವಿ ಕಾರ್ಯ ನಿರ್ವಹಣೆಗೆ ಪಕ್ಷದ ಹಿರಿಯ ನಾಯಕರು ಶುಭ ಹಾರೈಸಿದ್ದಾರೆ.
ಸಮನ್ವಯಕಾರ :
ನಳಿನ್ ಅಧ್ಯಕ್ಷರಾದ ಸಂದರ್ಭ ದಲ್ಲಿ ಬಿಜೆಪಿಯಲ್ಲಿ ವಲಸಿಗರು ಮತ್ತು ಮೂಲ ಕಾರ್ಯಕರ್ತರು ಎಂಬ ಮಾತಿತ್ತು. ಆದರೆ ನಳಿನ್ ಎಲ್ಲರನ್ನೂ ಸಮಾನ ವಾಗಿ ಪರಿಗಣಿಸಿ ವಲ ಸಿಗ ರಿಗೆ ತಾವು ಹೊರಗಿ ನವರು ಎನ್ನುವ ಭಾವ ಮೂಡ ದಂತೆ ನಿರ್ವಹಿಸಿರುವುದು ಪಕ್ಷ ಒಗ್ಗಟ್ಟಾಗಿರಲು ಕಾರಣ ವಾಗಿದೆ. ಅವರ ಸರಳ ಮತ್ತು ಸೂಕ್ಷ್ಮ ನಡೆಯೂ ಪಕ್ಷದ ವರ್ಚಸ್ಸು ವೃದ್ಧಿಗೆ ಕಾರಣ ಎಂಬ ಅಭಿಪ್ರಾಯ ಕಾರ್ಯಕರ್ತರ ವಲಯದಲ್ಲಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…