ಬೆಂಗಳೂರು: ಚುನಾವಣೆ ಬರುತ್ತಿದೆ ಅಂತಾ ಬಿಜೆಪಿ ಅವರು ತರಾತುರಿಯಲ್ಲಿ ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆಯನ್ನ ವಿಧಾನಸೌಧದಲ್ಲಿ ನಿರ್ಮಾಣ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದರು.
ಪ್ರತಿಮೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಸಚಿವರಿಂದ ಶಂಕುಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಸ್ವಂತ ಆಸ್ತಿಯಿಂದ ಪ್ರತಿಮೆ ಮಾಡಲಿ, ಒಳ್ಳೆ ಕೆಲಸ ಮಾಡಲಿ. ಚುನಾವಣೆ ಬಂತು ಅಂತ ತರಾತುರಿಯಲ್ಲಿ ಪ್ರತಿಮೆ ನಿರ್ಮಾಣ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕೆಂಪೇಗೌಡರು ಬೆಂಗಳೂರು ಕಟ್ಟಿದ್ದಾರೆ. ಬಸವಣ್ಣನವರು ನಾಡಿಗೆ ಒಳ್ಳೆ ಸಂಸ್ಕೃತಿ ಕಲಿಸಿಕೊಟ್ಟಿದ್ದಾರೆ. ಸರ್ಕಾರದ ಇಚ್ಚೆಯಂತೆ ಪ್ರತಿಮೆ ಮಾಡಲಿ. ಬಿಜೆಪಿ ಅವರು ಪ್ರತಿಮೆ ಮಾಡಲು ಬಹಳ ಅರ್ಜೆಂಟಾಗಿ ಇದ್ದಾರೆ ಅಂತ ಲೇವಡಿ ಮಾಡಿದರು.
ಬಿಜೆಪಿ ಅವರು ಆತುರವಾಗಿ ಎರಡು ತಿಂಗಳಲ್ಲಿ ಸ್ಥಾಪನೆ ಮಾಡ್ತೀವಿ ಅಂತಿದ್ದಾರೆ. ಬಿಜೆಪಿ ಅವರಿಗೆ ಗೊತ್ತಾಗಿದೆ ಎರಡು ತಿಂಗಳು ಮಾತ್ರ ಅವರ ಸರ್ಕಾರ ಇರೋದು ಅಂತ. ಹೀಗಾಗಿ ಪ್ರತಿಮೆ ಮಾಡಲು ಮುಂದಾಗ್ತಿದ್ದಾರೆ. ಬಿಜೆಪಿ ಅವರಿಗೆ ಶುಭವಾಗಲಿ ಅಂತ ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…