ಬೆಂಗಳೂರು: ಚುನಾವಣೆ ಬರುತ್ತಿದೆ ಅಂತಾ ಬಿಜೆಪಿ ಅವರು ತರಾತುರಿಯಲ್ಲಿ ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆಯನ್ನ ವಿಧಾನಸೌಧದಲ್ಲಿ ನಿರ್ಮಾಣ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದರು.
ಪ್ರತಿಮೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಸಚಿವರಿಂದ ಶಂಕುಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಸ್ವಂತ ಆಸ್ತಿಯಿಂದ ಪ್ರತಿಮೆ ಮಾಡಲಿ, ಒಳ್ಳೆ ಕೆಲಸ ಮಾಡಲಿ. ಚುನಾವಣೆ ಬಂತು ಅಂತ ತರಾತುರಿಯಲ್ಲಿ ಪ್ರತಿಮೆ ನಿರ್ಮಾಣ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕೆಂಪೇಗೌಡರು ಬೆಂಗಳೂರು ಕಟ್ಟಿದ್ದಾರೆ. ಬಸವಣ್ಣನವರು ನಾಡಿಗೆ ಒಳ್ಳೆ ಸಂಸ್ಕೃತಿ ಕಲಿಸಿಕೊಟ್ಟಿದ್ದಾರೆ. ಸರ್ಕಾರದ ಇಚ್ಚೆಯಂತೆ ಪ್ರತಿಮೆ ಮಾಡಲಿ. ಬಿಜೆಪಿ ಅವರು ಪ್ರತಿಮೆ ಮಾಡಲು ಬಹಳ ಅರ್ಜೆಂಟಾಗಿ ಇದ್ದಾರೆ ಅಂತ ಲೇವಡಿ ಮಾಡಿದರು.
ಬಿಜೆಪಿ ಅವರು ಆತುರವಾಗಿ ಎರಡು ತಿಂಗಳಲ್ಲಿ ಸ್ಥಾಪನೆ ಮಾಡ್ತೀವಿ ಅಂತಿದ್ದಾರೆ. ಬಿಜೆಪಿ ಅವರಿಗೆ ಗೊತ್ತಾಗಿದೆ ಎರಡು ತಿಂಗಳು ಮಾತ್ರ ಅವರ ಸರ್ಕಾರ ಇರೋದು ಅಂತ. ಹೀಗಾಗಿ ಪ್ರತಿಮೆ ಮಾಡಲು ಮುಂದಾಗ್ತಿದ್ದಾರೆ. ಬಿಜೆಪಿ ಅವರಿಗೆ ಶುಭವಾಗಲಿ ಅಂತ ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
Join our Whatsapp group by clicking the below link 👇👇
ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…
ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…
ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿ ಬ್ರಾಹ್ಮಣ ಸಮಾಜದ ಧಾರ್ಮಿಕ ಹಕ್ಕು, ಸಂಸ್ಕೃತಿ…
ಉಡುಪಿ ಅಗ್ನಿ ದುರಂತ: ತಡವಾದ ಅಗ್ನಿಶಾಮಕ ಪ್ರತಿಕ್ರಿಯೆಗೆ ತನಿಖೆ ಮತ್ತು ಪೀಡಿತರಿಗೆ ತಕ್ಷಣ ಪರಿಹಾರಕ್ಕೆ SDPI ಆಗ್ರಹ ಉಡುಪಿ: ಉಡುಪಿ…
ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ ಬೆಂಗಳೂರು : ಮಕ್ಕಳಲ್ಲಿ ಸಾಮಾನ್ಯ…
ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ಮಹಿಳೆ : ವೈದ್ಯರಿಲ್ಲದೆ ರೈಲಿನಲ್ಲಿದ್ದ ಮಹಿಳೆಯರಿಂದಲೇ ಹೆರಿಗೆ ಮಂಗಳೂರು: ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ…