ಬೆಂಗಳೂರು: ಚುನಾವಣೆ ಬರುತ್ತಿದೆ ಅಂತಾ ಬಿಜೆಪಿ ಅವರು ತರಾತುರಿಯಲ್ಲಿ ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆಯನ್ನ ವಿಧಾನಸೌಧದಲ್ಲಿ ನಿರ್ಮಾಣ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದರು.
ಪ್ರತಿಮೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಸಚಿವರಿಂದ ಶಂಕುಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಸ್ವಂತ ಆಸ್ತಿಯಿಂದ ಪ್ರತಿಮೆ ಮಾಡಲಿ, ಒಳ್ಳೆ ಕೆಲಸ ಮಾಡಲಿ. ಚುನಾವಣೆ ಬಂತು ಅಂತ ತರಾತುರಿಯಲ್ಲಿ ಪ್ರತಿಮೆ ನಿರ್ಮಾಣ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕೆಂಪೇಗೌಡರು ಬೆಂಗಳೂರು ಕಟ್ಟಿದ್ದಾರೆ. ಬಸವಣ್ಣನವರು ನಾಡಿಗೆ ಒಳ್ಳೆ ಸಂಸ್ಕೃತಿ ಕಲಿಸಿಕೊಟ್ಟಿದ್ದಾರೆ. ಸರ್ಕಾರದ ಇಚ್ಚೆಯಂತೆ ಪ್ರತಿಮೆ ಮಾಡಲಿ. ಬಿಜೆಪಿ ಅವರು ಪ್ರತಿಮೆ ಮಾಡಲು ಬಹಳ ಅರ್ಜೆಂಟಾಗಿ ಇದ್ದಾರೆ ಅಂತ ಲೇವಡಿ ಮಾಡಿದರು.
ಬಿಜೆಪಿ ಅವರು ಆತುರವಾಗಿ ಎರಡು ತಿಂಗಳಲ್ಲಿ ಸ್ಥಾಪನೆ ಮಾಡ್ತೀವಿ ಅಂತಿದ್ದಾರೆ. ಬಿಜೆಪಿ ಅವರಿಗೆ ಗೊತ್ತಾಗಿದೆ ಎರಡು ತಿಂಗಳು ಮಾತ್ರ ಅವರ ಸರ್ಕಾರ ಇರೋದು ಅಂತ. ಹೀಗಾಗಿ ಪ್ರತಿಮೆ ಮಾಡಲು ಮುಂದಾಗ್ತಿದ್ದಾರೆ. ಬಿಜೆಪಿ ಅವರಿಗೆ ಶುಭವಾಗಲಿ ಅಂತ ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
Join our Whatsapp group by clicking the below link 👇👇
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದು ಬಿದ್ದ ಕಾಲು ಸಂಕ : 8 ಮಂದಿಗೆ ಗಾಯ ಮಂಗಳೂರು: ದೈವದ ಭಂಡಾರ …
ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆಗೆ ಪ್ರತಿ ತಿಂಗಳು 75,000 ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ ಬೆಂಗಳೂರು :…
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…