BPL ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ : ಉಮೇಶ್ ಕತ್ತಿ -Vishwanews24
BPL ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ : ಉಮೇಶ್ ಕತ್ತಿ -Vishwanews24
ಬೆಂಗಳೂರು: BPL ಕಾರ್ಡ್ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ಸಚಿವ ಉಮೇಶ್ ಕತ್ತಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಇದೇ ವೇಳೆ ಅವರು ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನೇ ಮುಂದುವರಿಸಲಾಗುವುದು, ನಾನು ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಹೊಸ ನಿಯಮಗಳನ್ನು ನಾನು ಜಾರಿಗೆ ತಂದಿಲ್ಲ ಅಂತ ಹೇಳಿದ್ದಾರೆ.
ಟಿವಿ, ಫ್ರಿಡ್ಜ್, ವಾಹನಗಳನ್ನು ಹೊಂದಿರುವವರಿಗೆ ಬಿ.ಪಿ.ಎಲ್ ಕಾರ್ಡ್ ಸ್ಥಗಿತಗೊಳಿಸಿವುದಾಗಿ ಆಹಾರ ಸಚಿವ ಉಮೇಶ್ ಕತ್ತಿ ಭಾನುವಾರ ಬೆಳಗಾವಿಯಲ್ಲಿ ಹೇಳಿದ್ದರು.
ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಮಹಿಳೆಯರ ಮೇಲಿನ ದೌರ್ಜನ್ಯ : ಸಿದ್ದರಾಮಯ್ಯ -Vishwanews24
ಸಚಿವರ ಈ ವರ್ತನೆ ವಿರುದ್ದ ರಾಜಕೀಯ ನಾಯಕರುಗಳು ಸೇರಿದಂತೆ ಅನೇಕ ಮಂದಿ ವಿರೋಧ ವ್ಯಕ್ತಪಡಿಸಿದ್ದರು. 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್ ಹೊಂದಿದ್ರೆ ಕೂಡಲೇ ಅದನ್ನು ವಾಪಸ್ಸು ನೀಡುವಂತೆ ಹೇಳಿದ್ದರು. ಇದಲ್ಲದೇ ಕೆಲವು ಸರ್ಕಾರಿ ಅಧಿಕಾರಿಗಳು ಕೂಡ ಬಿಪಿಎಲ್ ಕಾರ್ಡ್ ಅನ್ನು ಹೊಂದಿದ್ದು ಅವರು ಕೂಡ ಕಾರ್ಡ್ ಅನ್ನು ವಾಪಸ್ಸು ನೀಡುವಂತೆ ಆದೇಶ ಮಾಡಿದ್ದರು.
