BREAKING ಉದ್ಯಾವರ ಬಸ್ ಪಲ್ಟಿ ಹಲವರಿಗೆ ಗಾಯ – Vishwanews24
BREAKING ಉದ್ಯಾವರ ಬಸ್ ಪಲ್ಟಿ ಹಲವರಿಗೆ ಗಾಯ – Vishwanews24
ಉಡುಪಿ ಮೇ 12: ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರದ ಬಲಾಯಿಪಾದೆ ಬಳಿ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ ಬಸ್ ಬಲಾಯಿಪಾದೆಯ ಬಳಿ ಬ್ಯಾರಿಕೇಡ್ ದಾಟುವಾಗ ಘಟನೆ ನಡೆದಿದ್ದು, ಬಸ್ ರಾಷ್ಟ್ರೀಯ ಹೆದ್ದಾರಿ ಡಿವೈಡರ್ ಮೇಲೆ ಮಗುಚಿ ಬಿದ್ದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸಾರ್ವಜನಿಕರ ಸಹಕಾರದೊಂದಿಗೆ ಪ್ರಯಾಣಿಕರನ್ನು ಬಸ್ ನಿಂದ ಸುರಕ್ಷಿತವಾಗಿ ಇಳಿಸಿದ್ದಾರೆ. ಘಟನೆಯಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.


