ದಾವಣಗೆರೆ: ಕಳೆದ ಐದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಪತ್ತೆಯಾಗಿದೆ. ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಮೊದಲಿಗೆ ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು,. ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ. ಅಲ್ಲದೇ ಕಾರಿನಲ್ಲಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಮೃತದೇಹ ಸಿಕ್ಕಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದ್ದು, ಕ್ರೇನ್ ಬಳಸಿ ಕಾರನ್ನು ಮೇಲೆತ್ತಿದ್ದಾರೆ. ಬಳಿಕ ಕಾರಿನಲ್ಲಿ ಚಂದ್ರಶೇಖರ್ ಶವ ಸಹ ಪತ್ತೆಯಾಗಿದೆ. ಕಾರನ್ನು ಕಾಲುವೆಯಿಂದ ಮೇಲೆತ್ತಿದಾಗ ಏರ್ಬ್ಯಾಗ್ ಓಪನ್ ಆಗಿರುವುದು ಕಂಡುಬಂದಿದೆ.ಇನ್ನು ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ. ಸೋದರನ ಪುತ್ರನ ಶವ ಕಂಡು ರೇಣುಕಾಚಾರ್ಯ ಅವರ ಆಕ್ರಂದನ ಮುಗಿಲುಮುಟ್ಟಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…