ಬೆಂಗಳೂರು: ಉಡುಪಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ರಾಜೀನಾಮೆ ನೀಡುವಂತೆ ಸೂಚನೆ ನೀಡಿದೆ.
ಹೈಕಮಾಂಡ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಅಲ್ಲದೆ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವರು ಮೈಸೂರು ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡುವ ಸಾಧ್ಯತೆಗಳಿವೆ.
ಕಳೆದ ರಾತ್ರಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ದೆಹಲಿಯಲ್ಲಿ ಅಮಿತ್ ಶಾ ಜೊತೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಕರಣ ರಾಜ್ಯದಲ್ಲಿ ಸರ್ಕಾರ ಮತ್ತು ಪಕ್ಷದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಮಾಹಿತಿ ಪಡೆದುಕೊಂಡ ಬಳಿಕ ಹೈಕಮಾಂಡ್ ಈಶ್ವರಪ್ಪ ರಾಜೀನಾಮೆಗೆ ಸೂಚನೆ ಕೊಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…