ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಶಫೀಕ್ ಬೆಳ್ಳಾರೆ ಹಾಗೂ ಝಾಕಿರ್ ಸವಣೂರು ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿಯೂ ಪೋಲಿಸ್ ವಶದಲ್ಲಿದ್ದು ಆತನ ಬಂಧನ ಖಚಿತವಾಗಿಲ್ಲ.
ಸಿಸಿಟಿವಿ ಹೇಳಿದ ಸಾಕ್ಷ್ಯ
ಪ್ರವೀಣ್ ಹತ್ಯೆಯ ಬಳಿಕ ಮಾಹಿತಿ ಕಲೆ ಹಾಕಿದ ಪೋಲಿಸರಿಗೆ 40 ನಿಮಿಷ ಕಾದು ರಕ್ತದೋಕುಳಿ ಹರಿಸಿರುವ ಕಿಲ್ಲರ್ಸ್ ಗಳ ಸಿಸಿಟಿವಿ ದೃಶ್ಯ ಸಿಕ್ಕಿತ್ತು. ಕೊಲೆಗೂ ಮೊದಲು ಅದೊಂದು ಜಾಗದಲ್ಲೇ ಹಂತಕರು ಟೆಂಟ್ ಹಾಕಿದ್ದು, ಸಿಸಿಟಿವಿಯಲ್ಲಿ ಹಂತಕರ ಹೆಜ್ಜೆಗುರುತು ಸೆರೆಯಾಗಿತ್ತು.
ಪ್ರವೀಣ್ ಕೊಲೆಗೂ ಮೊದಲು ಹಂತಕರು ಭಯಾನಕ ಸಂಚು ರೂಪಿಸಿದ್ದು, ಪ್ರವೀಣ್ ಚಿಕನ್ ಅಂಗಡಿಯಿಂದ 50 ಮೀ. ದೂರದಲ್ಲಿ 40 ನಿಮಿಷದವರೆಗೂ ಒಂದೇ ಜಾಗದಲ್ಲಿ ಬೈಕ್ ನಿಲ್ಲಿಸಿದ್ದರು. ರಾತ್ರಿ 8 ಗಂಟೆ 1 ನಿಮಿಷ 51 ಸೆಕೆಂಡ್ಗೆ ಎಂಟ್ರಿ ಕೊಟ್ಟಿದ್ದು, 8 ಗಂಟೆ 1 ನಿಮಿಷ 57 ಸೆಕೆಂಡ್ಗೆ 50 ಮೀ. ದೂರದಲ್ಲಿ ಸ್ಟಾಪ್ ಮಾಡಿದ್ದರು. 8 ಗಂಟೆ 33 ನಿಮಿಷಕ್ಕೆ ಚಿಕನ್ ಅಂಗಡಿ ಮುಂದೆ ಹೋಗಿ ಮತ್ತೆ ಮೊದಲಿದ್ದ ಅದೇ ಜಾಗದಲ್ಲಿ ಸ್ಟಾಪ್ ಆಗಿದ್ದರು.
8 ಗಂಟೆ 38 ನಿಮಿಷಕ್ಕೆ ಮತ್ತೆ ಅಂಗಡಿ ದಿಕ್ಕಿನತ್ತ ಹಂತಕರು ಸಾಗಿದ್ದು, 8.38 ರಿಂದ 8.40 ರ ಸಮಯದಲ್ಲಿ ಹತ್ಯೆ ನಡೆದಿರುವ ಸಾಧ್ಯತೆಯಿದ್ದು, 8 ಗಂಟೆ 40 ನಿಮಿಷಕ್ಕೆ ಅಂಗಡಿಯತ್ತ ಜನ ಓಡೋಡಿ ಬಂದಿದ್ದಾರೆ. ಈ ವೇಳೆ ಹಂತಕರು ಪರಾರಿಯಾಗಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…