ಮಂಗಳೂರು: ಸುರತ್ಕಲ್ ಟೋಲ್ಗೇಟ್ ವಿವಾದ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಟೋಲ್ ಗೇಟ್ ಕಿತ್ತೆಸೆಯಲು ಯತ್ನಿಸಿದ ಹಿನ್ನೆಲೆಯಲ್ಲಿ ಹೋರಾಟಗಾರರ ಮೇಲೆ ಎಫ್ಐಆರ್ ದಾಖಲಾಗಿದೆ.
ಹೀಗಾಗಿ ಟೋಲ್ ಸಂಗ್ರಹ ನಿಲ್ಲುವವರೆಗೂ ರಾತ್ರಿ- ಹಗಲು ಅನಿರ್ದಿಷ್ಟ ಧರಣಿಗೆ ನಿರ್ಧರಿಸಿದ್ದಾರೆ. ಅ.18 ರಂದು ಮಂಗಳೂರಿನ ಸುರತ್ಕಲ್ ಟೋಲ್ಗೇಟ್ ಬಳಿ ಭಾರೀ ಹೈಡ್ರಾಮಾವೇ ನಡೆದಿತ್ತು. ಸುರತ್ಕಲ್ ಟೋಲ್ಗೇಟ್ ಅಕ್ರಮ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಹೋರಾಟ ಉಗ್ರ ಸ್ವರೂಪ ಪಡೆದಿತ್ತು. ಪೊಲೀಸರು ಹಾಕಿದ್ದ ತಡೆಬೇಲಿ ಮುರಿದು ಟೋಲ್ಗೇಟ್ನತ್ತ ನುಗ್ಗಿದ್ದ ಹೋರಾಟಗಾರರು, ಹೈಡ್ರಾಮಾ ನಡೆಸಿದ್ದು, ಬಳಿಕ ಪೊಲೀಸರು ನೂರಾರು ಹೋರಾಟಗಾರರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ರು. ಆದರೆ ಇದೀಗ ಟೋಲ್ಗೇಟ್ನ ಗುತ್ತಿಗೆದಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ನೀಡಿದ ದೂರಿನಂತೆ ಹೋರಾಟಗಾರರ ಮೇಲೆ ಎರಡು ಎಫ್ಐಆರ್ ದಾಖಲಾಗಿದೆ.
ಟೋಲ್ಗೇಟನ್ನು ನ.7ರೊಳಗಾಗಿ ಸ್ಥಗಿತಗೊಳಿಸುವ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಆದರೆ ಇಂತಹ ದಿನಾಂಕಗಳು ಕಳೆದ ಆರು ವರ್ಷದಿಂದ ಆಗಿರೋದ್ರಿಂದ ಇದರ ಬಗ್ಗೆ ನಂಬಿಕೆ ಇಲ್ಲ. ಹೀಗಾಗಿ ಹೋರಾಟ ಸಮಿತಿ ಸಭೆ ಸೇರಿ ಮುಂದಿನ ಹೋರಾಟದ ಭಾಗವಾಗಿ ಅಕ್ಟೋಬರ್ 28 ರಿಂದ ಟೋಲ್ಗೇಟ್ ಮುಂಭಾಗದಲ್ಲಿ ರಾತ್ರಿ ಹಗಲು ಅನಿರ್ದಿಷ್ಟ ಧರಣಿ ನಡೆಸಲು ನಿರ್ಧರಿಸಲಾಗಿದೆ.
ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು ವ್ಯಕ್ತಿ ನಾಪತ್ತೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…