ಮಂಗಳೂರು: ಸುರತ್ಕಲ್ ಟೋಲ್ಗೇಟ್ ವಿವಾದ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಟೋಲ್ ಗೇಟ್ ಕಿತ್ತೆಸೆಯಲು ಯತ್ನಿಸಿದ ಹಿನ್ನೆಲೆಯಲ್ಲಿ ಹೋರಾಟಗಾರರ ಮೇಲೆ ಎಫ್ಐಆರ್ ದಾಖಲಾಗಿದೆ.
ಹೀಗಾಗಿ ಟೋಲ್ ಸಂಗ್ರಹ ನಿಲ್ಲುವವರೆಗೂ ರಾತ್ರಿ- ಹಗಲು ಅನಿರ್ದಿಷ್ಟ ಧರಣಿಗೆ ನಿರ್ಧರಿಸಿದ್ದಾರೆ. ಅ.18 ರಂದು ಮಂಗಳೂರಿನ ಸುರತ್ಕಲ್ ಟೋಲ್ಗೇಟ್ ಬಳಿ ಭಾರೀ ಹೈಡ್ರಾಮಾವೇ ನಡೆದಿತ್ತು. ಸುರತ್ಕಲ್ ಟೋಲ್ಗೇಟ್ ಅಕ್ರಮ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಹೋರಾಟ ಉಗ್ರ ಸ್ವರೂಪ ಪಡೆದಿತ್ತು. ಪೊಲೀಸರು ಹಾಕಿದ್ದ ತಡೆಬೇಲಿ ಮುರಿದು ಟೋಲ್ಗೇಟ್ನತ್ತ ನುಗ್ಗಿದ್ದ ಹೋರಾಟಗಾರರು, ಹೈಡ್ರಾಮಾ ನಡೆಸಿದ್ದು, ಬಳಿಕ ಪೊಲೀಸರು ನೂರಾರು ಹೋರಾಟಗಾರರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ರು. ಆದರೆ ಇದೀಗ ಟೋಲ್ಗೇಟ್ನ ಗುತ್ತಿಗೆದಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ನೀಡಿದ ದೂರಿನಂತೆ ಹೋರಾಟಗಾರರ ಮೇಲೆ ಎರಡು ಎಫ್ಐಆರ್ ದಾಖಲಾಗಿದೆ.
ಟೋಲ್ಗೇಟನ್ನು ನ.7ರೊಳಗಾಗಿ ಸ್ಥಗಿತಗೊಳಿಸುವ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಆದರೆ ಇಂತಹ ದಿನಾಂಕಗಳು ಕಳೆದ ಆರು ವರ್ಷದಿಂದ ಆಗಿರೋದ್ರಿಂದ ಇದರ ಬಗ್ಗೆ ನಂಬಿಕೆ ಇಲ್ಲ. ಹೀಗಾಗಿ ಹೋರಾಟ ಸಮಿತಿ ಸಭೆ ಸೇರಿ ಮುಂದಿನ ಹೋರಾಟದ ಭಾಗವಾಗಿ ಅಕ್ಟೋಬರ್ 28 ರಿಂದ ಟೋಲ್ಗೇಟ್ ಮುಂಭಾಗದಲ್ಲಿ ರಾತ್ರಿ ಹಗಲು ಅನಿರ್ದಿಷ್ಟ ಧರಣಿ ನಡೆಸಲು ನಿರ್ಧರಿಸಲಾಗಿದೆ.
ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು ವ್ಯಕ್ತಿ ನಾಪತ್ತೆ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…