BREAKING _ ಹಿಜಾಬ್ ವಿವಾದ : ಸುಪ್ರೀಂಕೋರ್ಟ್​ನಿಂದ ವಿಭಜಿತ ತೀರ್ಪು ಪ್ರಕಟ ; ನ್ಯಾಯಮೂರ್ತಿಗಳ ಪೀಠಕ್ಕೆ  ವರ್ಗಾವಣೆ – Vishwanews24

Featured, ರಾಷ್ಟ್ರ ನ್ಯೂಸ್

ಹಿಜಾಬ್ ವಿವಾದ : ಸುಪ್ರೀಂಕೋರ್ಟ್​ನಿಂದ ವಿಭಜಿತ ತೀರ್ಪು ಪ್ರಕಟ ; ನ್ಯಾಯಮೂರ್ತಿಗಳ ಪೀಠಕ್ಕೆ  ವರ್ಗಾವಣೆ

ದೆಹಲಿ: ಇಡೀ ವಿಶ್ವ ಕಾತರದಿಂದ ಎದುರು ನೋಡುತ್ತಿದ್ದ ಹಿಜಾಬ್ ವಿವಾದ ಕುರಿತು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿತು. ಹಿಜಾಬ್​ನ ಪರ ಹಾಗೂ ವಿರುದ್ಧ ವಾದ ಮಂಡಿಸಿದ್ದ ಬಹುತೇಕ ವಕೀಲರು ಈ ವೇಳೆ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಮತ್ತು ಸುಧಾಂಶು ಧುಲಿಯಾ ವಿಭಜಿತ ತೀರ್ಪು ನೀಡಿದ್ದಾರೆ. ಪ್ರಸ್ತುತ ನ್ಯಾಯಮೂರ್ತಿ ಹೇಮಂತ್ ಗುಪ್ತ ತೀರ್ಪು ಓದುತ್ತಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ಅವರು ವಜಾ ಮಾಡಿದ್ದಾರೆ. ಆದರೆ ನ್ಯಾಯಮೂರ್ತಿ ಸುಧಾಂಶು ಅವರು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದ್ದಾರೆ.

ಮಂಗಳೂರು: SDPI, PFI ನಾಯಕರ ಮನೆ ಮೇಲೆ ದಾಳಿ ; ಐವರು ಅರೆಸ್ಟ್‌ – Vishwanews24

ಒಬ್ಬ ನ್ಯಾಯಮೂರ್ತಿ ಹಿಜಾಬ್ ಪರವಾಗಿ ತೀರ್ಪು ನೀಡಿದ್ದರೆ, ಮತ್ತೊಬ್ಬರು ಹಿಜಾಬ್ ವಿರುದ್ಧ ತೀರ್ಪು ನೀಡಿದ್ದಾರೆ. ಇಬ್ಬರು ವಿಭಿನ್ನ ತೀರ್ಪು ನೀಡಿರುವುದರಿಂದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ  ವರ್ಗಾವಣೆ ಮಾಡಲಾಗಿದೆ.

ಪ್ರಕರಣದ ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮುಂದಿನ ದಿನಗಳಲ್ಲಿ ವಿಸ್ತೃತ ನ್ಯಾಯಪೀಠ ರಚಿಸುವ ಸಾಧ್ಯತೆಯಿದೆ. ಪ್ರಕರಣವನ್ನು ಮತ್ತೊಮ್ಮೆ ಆಮೂಲಾಗ್ರ ಪರಿಶೀಲಿಸಿದ ನಂತರ ವಿಸ್ತೃತ ನ್ಯಾಯಪೀಠವು ತನ್ನ ತೀರ್ಪು ನೀಡಲಿದೆ. ವಿಸ್ತೃತ ನ್ಯಾಯಪೀಠ ರಚಿಸುವುದು ಮತ್ತು ವಿಚಾರಣೆಯ ಸ್ವರೂಪ ನಿರ್ಧರಿಸುವುದು ಮುಖ್ಯ ನ್ಯಾಯಮೂರ್ತಿಯ ವಿವೇಚನೆಗೆ ಬಿಟ್ಟ ಅಧಿಕಾರವಾಗಿರುತ್ತದೆ.

Leave a Reply