ದೆಹಲಿ: ಇಡೀ ವಿಶ್ವ ಕಾತರದಿಂದ ಎದುರು ನೋಡುತ್ತಿದ್ದ ಹಿಜಾಬ್ ವಿವಾದ ಕುರಿತು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿತು. ಹಿಜಾಬ್ನ ಪರ ಹಾಗೂ ವಿರುದ್ಧ ವಾದ ಮಂಡಿಸಿದ್ದ ಬಹುತೇಕ ವಕೀಲರು ಈ ವೇಳೆ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಮತ್ತು ಸುಧಾಂಶು ಧುಲಿಯಾ ವಿಭಜಿತ ತೀರ್ಪು ನೀಡಿದ್ದಾರೆ. ಪ್ರಸ್ತುತ ನ್ಯಾಯಮೂರ್ತಿ ಹೇಮಂತ್ ಗುಪ್ತ ತೀರ್ಪು ಓದುತ್ತಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ಅವರು ವಜಾ ಮಾಡಿದ್ದಾರೆ. ಆದರೆ ನ್ಯಾಯಮೂರ್ತಿ ಸುಧಾಂಶು ಅವರು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದ್ದಾರೆ.
ಮಂಗಳೂರು: SDPI, PFI ನಾಯಕರ ಮನೆ ಮೇಲೆ ದಾಳಿ ; ಐವರು ಅರೆಸ್ಟ್ – Vishwanews24
ಒಬ್ಬ ನ್ಯಾಯಮೂರ್ತಿ ಹಿಜಾಬ್ ಪರವಾಗಿ ತೀರ್ಪು ನೀಡಿದ್ದರೆ, ಮತ್ತೊಬ್ಬರು ಹಿಜಾಬ್ ವಿರುದ್ಧ ತೀರ್ಪು ನೀಡಿದ್ದಾರೆ. ಇಬ್ಬರು ವಿಭಿನ್ನ ತೀರ್ಪು ನೀಡಿರುವುದರಿಂದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.
ಪ್ರಕರಣದ ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮುಂದಿನ ದಿನಗಳಲ್ಲಿ ವಿಸ್ತೃತ ನ್ಯಾಯಪೀಠ ರಚಿಸುವ ಸಾಧ್ಯತೆಯಿದೆ. ಪ್ರಕರಣವನ್ನು ಮತ್ತೊಮ್ಮೆ ಆಮೂಲಾಗ್ರ ಪರಿಶೀಲಿಸಿದ ನಂತರ ವಿಸ್ತೃತ ನ್ಯಾಯಪೀಠವು ತನ್ನ ತೀರ್ಪು ನೀಡಲಿದೆ. ವಿಸ್ತೃತ ನ್ಯಾಯಪೀಠ ರಚಿಸುವುದು ಮತ್ತು ವಿಚಾರಣೆಯ ಸ್ವರೂಪ ನಿರ್ಧರಿಸುವುದು ಮುಖ್ಯ ನ್ಯಾಯಮೂರ್ತಿಯ ವಿವೇಚನೆಗೆ ಬಿಟ್ಟ ಅಧಿಕಾರವಾಗಿರುತ್ತದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…