ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಕೇರಳದಲ್ಲಿ ಮೂರನೇ ವ್ಯಕ್ತಿ ಪೊಲೀಸ್ ವಶಕ್ಕೆ – Vishwanews24

Featured, ದಕ್ಷಿಣ ಕನ್ನಡ

BREAKING – ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಮತ್ತೊಬ್ಬ ಶಂಕಿತ ಆರೋಪಿ ಪೊಲೀಸ್ ವಶಕ್ಕೆ – Vishwanews24

ಬೆಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಬಂಧಿಸಲಾಗಿದೆ.  ಕೇರಳದ ಕಣ್ಣೂರಿನ ತಲಸೇರಿಯಲ್ಲಿ ಓರ್ವ ವ್ಯಕ್ತಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು,  ಪ್ರವೀಣ್ ಹತ್ಯೆಯಲ್ಲಿ ಭಾಗಿಯಾಗಿರುವ ಅನುಮಾನದ ಮೇಲೆ ವಶಕ್ಕೆ ಪಡೆಯಲಾಗಿದೆ.  ಶಂಕಿತ ವ್ಯಕ್ತಿ ತಲಸೇರಿಯಲ್ಲಿ ಚಿಕಿನ್ ಸೆಂಟರ್ ಅಂಗಡಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಶಂಕಿತ ವ್ಯಕ್ತಿಯನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧಿಸಿ ಈಗಾಗಲೇ  ಝಾಕಿರ್ ಮತ್ತು ಶಫೀಕ್ ಎಂಬವರನ್ನು ಬಂಧಿಸಲಾಗಿದ್ದು, ಕೇರಳ ನಂಟು ಹೊಂದಿರುವ ಬಗ್ಗೆ ವಿಚಾರಣೆ ನಡೆಸಲಾಗಿತ್ತು.  ಈವರೆಗೆ ಮೂರು ಜನರ ಬಂಧನವಾದಂತಾಗಿದೆ. ಇನ್ನು ಬಂಧಿತ ಝಾಕಿರ್ ಮತ್ತು ಶಫೀಕ್  ಅವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಹಂತಕರನ್ನು ಪೊಲೀಸ್ ಕಸ್ಟಡಿಗೆ ವಹಿಸಿದೆ. ಇನ್ನು ಹತ್ಯೆ ಪ್ರಕರಣವನ್ನು ಸರಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, 20 ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಲಾಗಿದೆ. ಜೊತೆಗೆ ಬೆಳ್ಳಾರೆ ಸಮೀಪದಲ್ಲರುವ ಎಲ್ಲಾ ಸಿಸಿಟಿವಿಗಳನ್ನು ಪರಿಶೀಲನೆ  ನಡೆಸಿ ಶಂಕಿತರ ಚಲನವಲನಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದೆ.

Leave a Reply