ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಕುಟುಂಬ ಸದಸ್ಯರು ಹಾಗೂ ಸಚಿವ ಎಸ್.ಟಿ ಸೋಮಶೇಖರ್ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿರುವ ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಧೀಶ ಬಿ.ಜಯಂತ್ಕುಮಾರ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 2ರಂದು ಅಂತಿಮ ವರದಿ ಸಲ್ಲಿಸಲು ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಕೋರ್ಟ್ ಸೂಚಿಸಿದೆ.
ದೂರಿನಲ್ಲಿ ಬಿ.ಎಸ್.ಯಡಿಯೂರಪ್ಪ , ಪುತ್ರ ಬಿ.ವೈ.ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಬಿಎಸ್ವೈ ಅವರ ಪುತ್ರಿ ಪದ್ಮಾವತಿ, ಅಳಿಯ ಸಂಜಯ್ಶ್ರೀ, ಅಂದಿನ ಬಿಡಿಎ ಅಧ್ಯಕ್ಷ, ಹಾಲಿ ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ ಸಿ ಪ್ರಕಾಶ್, ಕೆ ರವಿ, ಬಿಎಸ್ವೈ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಹಾಗೂ ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.
ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24
ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…
ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ…
ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…
ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್…
ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್ ಸಿಂಹ ಪೋಸ್ಟ್ ಮೈಸೂರು:…
ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…