BSY ಭ್ರಷ್ಟಾಚಾರದ ಆರೋಪ : ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ – Vishwanews24
BSY ಭ್ರಷ್ಟಾಚಾರದ ಆರೋಪ : ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಕುಟುಂಬ ಸದಸ್ಯರು ಹಾಗೂ ಸಚಿವ ಎಸ್.ಟಿ ಸೋಮಶೇಖರ್ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿರುವ ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಧೀಶ ಬಿ.ಜಯಂತ್ಕುಮಾರ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 2ರಂದು ಅಂತಿಮ ವರದಿ ಸಲ್ಲಿಸಲು ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಕೋರ್ಟ್ ಸೂಚಿಸಿದೆ.
ದೂರಿನಲ್ಲಿ ಬಿ.ಎಸ್.ಯಡಿಯೂರಪ್ಪ , ಪುತ್ರ ಬಿ.ವೈ.ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಬಿಎಸ್ವೈ ಅವರ ಪುತ್ರಿ ಪದ್ಮಾವತಿ, ಅಳಿಯ ಸಂಜಯ್ಶ್ರೀ, ಅಂದಿನ ಬಿಡಿಎ ಅಧ್ಯಕ್ಷ, ಹಾಲಿ ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ ಸಿ ಪ್ರಕಾಶ್, ಕೆ ರವಿ, ಬಿಎಸ್ವೈ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಹಾಗೂ ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.
ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24
