Featured

BUDGET 2026 : ವಸತಿ, ಕಾರ್ಮಿಕ ಕಲ್ಯಾಣ, ಜಲಸಂಪನ್ಮೂಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಲಯಗಳಿಗೆ ಬಂಪರ್ ಕೊಡುಗೆ – vishwanews24

BUDGET 2026 : ರಾಜ್ಯದ ರೈತರಿಗೆ ಗುಡ್ ನ್ಯೂಸ್ – `ಗಂಗಾ ಕಲ್ಯಾಣ ಯೋಜನೆ’ಯಡಿ ಸಹಾಯಧನ 1,50,000 ರೂ.ಗೆ ಕ್ಕೆ ಏರಿಕೆ

ಬೆಂಗಳೂರು:ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂಬ ಘೋಷವಾಕ್ಯದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಿದ್ದಾರೆ. ವಸತಿ, ಕಾರ್ಮಿಕ ಕಲ್ಯಾಣ, ಜಲಸಂಪನ್ಮೂಲ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ವಲಯಗಳಿಗೆ ಬಂಪರ್ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಬಜೆಟ್‌ನ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ:

ವಸತಿ ಮತ್ತು ಮೂಲಸೌಕರ್ಯ 

ಮನೆಗಳ ನಿರ್ಮಾಣ: ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ. ಹಿಂದಿನ ಸರ್ಕಾರ ಅನುದಾನವಿಲ್ಲದೆ ಮಂಜೂರು ಮಾಡಿದ್ದ 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಕ್ರಮ.

ಅಂತಾರಾಷ್ಟ್ರೀಯ ಕ್ರೀಡಾಂಗಣ: ‘ಕೆ.ಹೆಚ್.ಬಿ ಸೂರ್ಯ ಕ್ರೀಡಾ ಗ್ರಾಮ’ ಹೆಸರಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ.

ಇದನ್ನೂ ಓದಿ:

ರಿಯಾಯಿತಿ ದರದಲ್ಲಿ ನಿವೇಶನ: ‘ನಮ್ಮ ಮನೆ’ ಯೋಜನೆಯಡಿ ಮುಂದಿನ 2 ವರ್ಷಗಳಲ್ಲಿ 50,000 ನಿವೇಶನಗಳ ವಿತರಣೆ.

ರೈತರು ಮತ್ತು ಸಹಕಾರ 

ಶೂನ್ಯ ಬಡ್ಡಿ ಸಾಲ: 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಒಟ್ಟು ರೂ. 30,000 ಕೋಟಿ ಕೃಷಿ ಸಾಲ ವಿತರಣೆ ಗುರಿ.

ಎಪಿಎಂಸಿ ಡಿಜಿಟಲೀಕರಣ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಸಂಪೂರ್ಣ ಡಿಜಿಟಲೀಕರಣಕ್ಕಾಗಿ ರೂ. 10 ಕೋಟಿ ವೆಚ್ಚದಲ್ಲಿ ಇಆರ್‌ಪಿ (ERP) ವ್ಯವಸ್ಥೆ ಜಾರಿ.

ಜಲಸಂಪನ್ಮೂಲ 

ಮೇಕೆದಾಟು ಯೋಜನೆ: ಪರಿಷ್ಕೃತ ಡಿಪಿಆರ್ (DPR) ಸಿದ್ಧಪಡಿಸಿ ಕೇಂದ್ರ ಸರ್ಕಾರದ ಅರಣ್ಯ ಇಲಾಖೆ ಅನುಮೋದನೆಗೆ ಶೀಘ್ರ ಪ್ರಸ್ತಾವನೆ.

ಎತ್ತಿನಹೊಳೆ: 2ನೇ ಹಂತದ 18.73 ಕಿ.ಮೀ ಕಾಲುವೆ ಕಾಮಗಾರಿಗಳ ಶೀಘ್ರ ಪೂರ್ಣ.

ಹೊಸ ಜಲಾಶಯ: ಕೊರಟಗೆರೆ ತಾಲೂಕಿನ ವಡೇರಹಳ್ಳಿ ಸಮೀಪ ಹೆಚ್ಚುವರಿ ನೀರು ಸಂಗ್ರಹಕ್ಕೆ 1.2 ಟಿ.ಎಂ.ಸಿ ಸಾಮರ್ಥ್ಯದ ಸಮತೋಲನಾ ಜಲಾಶಯ ನಿರ್ಮಾಣ.

ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ 

ಸ್ವಂತ ಕಟ್ಟಡಗಳು: 30 ಕ್ರೈಸ್ (CREIS) ವಸತಿ ಶಾಲೆಗಳಿಗೆ ರೂ. 660 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ.

ಬೌದ್ಧ ಅಭಿವೃದ್ಧಿ ನಿಗಮ: ಸಮಾಜ ಕಲ್ಯಾಣ ಇಲಾಖೆಯಡಿ ಹೊಸ ನಿಗಮ ಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ನಿಗಮಗಳಿಗೆ ಒಟ್ಟು ರೂ. 1,500 ಕೋಟಿ ಅನುದಾನ.

ಗಂಗಾ ಕಲ್ಯಾಣ: ಕೊಳವೆಬಾವಿ ವಿದ್ಯುದ್ದೀಕರಣ ಸಹಾಯಧನ ರೂ. 75,000 ದಿಂದ ರೂ. 1,50,000 ಕ್ಕೆ ಏರಿಕೆ.

ಎಸ್‌ಟಿ (ST) ಕಲ್ಯಾಣ: ಪ್ರತ್ಯೇಕ ‘ಪರಿಶಿಷ್ಟ ಪಂಗಡಗಳ ಆಯೋಗ’ ಸ್ಥಾಪನೆ, 50 ಹೊಸ ವಿದ್ಯಾರ್ಥಿ ನಿಲಯಗಳು ಮತ್ತು ನಿರುದ್ಯೋಗಿ ಯುವಕ/ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಆರಂಭಿಸಲು ಶೇ.75 (ಅಥವಾ 4 ಲಕ್ಷ ರೂ.) ಸಹಾಯಧನ.

ಇದನ್ನೂ ಓದಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 

ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುಗೆ: 1,39,844 ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಹೆಚ್ಚುವರಿ 1 ಜೊತೆ ಸಮವಸ್ತ್ರ ವಿತರಣೆ.

ಪ್ರೋತ್ಸಾಹಧನ ಹೆಚ್ಚಳ: ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ವೇಶ್ಯಾವಾಟಿಕೆಗೊಳಗಾದವರ ಆದಾಯೋತ್ಪನ್ನ ಚಟುವಟಿಕೆಗಳ ಪ್ರೋತ್ಸಾಹಧನ ರೂ. 45,000 ಕ್ಕೆ ಹೆಚ್ಚಳ.

ಮಾದಕ ವ್ಯಸನ ಮುಕ್ತ ಕೇಂದ್ರ: 18 ವರ್ಷದೊಳಗಿನ ಮಕ್ಕಳಿಗಾಗಿ ನಿಮ್ಹಾನ್ಸ್ (NIMHANS) ಮತ್ತು ಡಿಮ್ಹಾನ್ಸ್ (DIMHANS) ಸಹಯೋಗದಲ್ಲಿ ಪುನರ್ವಸತಿ ಕೇಂದ್ರಗಳ ಆರಂಭ.

ಕಾರ್ಮಿಕ ಕಲ್ಯಾಣ 

ಕೌಶಲ್ಯ ತರಬೇತಿ ಅಕಾಡೆಮಿ: ಕಟ್ಟಡ ಕಾರ್ಮಿಕರಿಗಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ರೂ. 200 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೌಶಲ್ಯ ತರಬೇತಿ ಕೇಂದ್ರ.

ಶಿಕ್ಷಣಕ್ಕೆ ಒತ್ತು: ಕಾರ್ಮಿಕರ ಮಕ್ಕಳಿಗಾಗಿ ರೂ. 600 ಕೋಟಿ ವೆಚ್ಚದಲ್ಲಿ 10 ಜಿಟಿಟಿಸಿ (GTTC) ಕೇಂದ್ರಗಳು ಹಾಗೂ 62 ನೂತನ ‘ಶ್ರಮಿಕ ವಸತಿ ಶಾಲೆ’ಗಳ ಆರಂಭ.

ಕಾಯಕ ಭಾಗ್ಯ: ಅಸಂಘಟಿತ ಕಾರ್ಮಿಕರಿಗಾಗಿ ರೂ. 5 ಕೋಟಿ ವೆಚ್ಚದಲ್ಲಿ ಆನ್‌ಲೈನ್ ಉದ್ಯೋಗ ವಿನಿಮಯ ಕೇಂದ್ರ

ಇದನ್ನೂ ಓದಿ:

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago