Featured

Congress ಗ್ಯಾರಂಟಿ  : ಆ. 15ರಂದು ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮನೆಯ ಒಡತಿಗೆ ಪ್ರತಿ ತಿಂಗಳು ರೂ.2,000 ಹಣ ಖಾತೆಗೆ ಜಮಾ – Vishwanews24

Congress ಗ್ಯಾರಂಟಿ  : ಆ. 15ರಂದು ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮನೆಯ ಒಡತಿಗೆ ಪ್ರತಿ ತಿಂಗಳು ರೂ.2,000 ಹಣ ಖಾತೆಗೆ ಜಮಾ

ಗೃಹ ಲಕ್ಷ್ಮೀ : ಇದನ್ನು ಜಾರಿಗೊಳಿಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಬ್ಯಾಂಕ್ ಅಕೌಂಟ್ಸ್, ಆಧಾರ್ ಕಾರ್ಡ್ ಒದಗಿಸಬೇಕಾಗುತ್ತದೆ. ಯಾರು ಮನೆಯ ಯಜಮಾನಿ ಎಂಬುದು ತೀರ್ಮಾನಿಸಬೇಕಾಗಿದೆ. ನಾವು ಹೇಳಿರುವಂತದ್ದು ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ ಎಂದಿದ್ದೆವು. ಆದ್ದರಿಂದ ಅಕೌಂಟ್ ಮಾಹಿತಿ, ಆಧಾರ್ ಕಾರ್ಡ್, ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15ರ ಒಳಗಾಗಿ ಮನೆ ಒಡತಿಯ ಮಾಹಿತಿ ನೀಡಬೇಕು. ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಇದು ಆದಮೇಲೆ ಜುಲೈ 15ರಿಂದ ಆಗಸ್ಟ್ 15ರ ಒಳಗಡೆ ಪ್ರೋಸಸ್ ಮಾಡಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಮನೆಯ ಯಜಮಾನಿ ಖಾತೆಗೆ 2000 ರೂ ಜಮಾ ಮಾಡುತ್ತೇವೆ ಎಂದರು.

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ದಾರರ ಮನೆಯ ಒಡತಿಯ ಖಾತೆಗೆ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲಾಗುತ್ತದೆ. ಮನೆಯ ಯಜಮಾನಿ ಯಾರು ಎನ್ನುವ ಬಗ್ಗೆ ಕುಟುಂಬಸ್ಥರೇ ಮಾಹಿತಿಯನ್ನು ನೀಡಬೇಕು. ಆ ಮಾಹಿತಿ ಆಧಾರದ ಮೇಲೆ ಪ್ರತಿ ತಿಂಗಳು 2000 ರೂ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಹೇಳಿದರು.

ಜೂನ್ ತಿಂಗಳಿನಿಂದಲೇ ಗೃಹ ಲಕ್ಷ್ಮೀ ಯೋಜನೆ ಹಣ ನೀಡಬೇಕು ಎಂಬುದಾಗಿ ತೀರ್ಮಾನಿಸಲಾಗಿತ್ತು. ಆದ್ರೇ ಕೆಲ ತಾಂತ್ರಿಕ ಮಾಹಿತಿಯ ಕಾರಣದಿಂದಾಗಿ ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಆಗಸ್ಟ್ 15ರಿಂದ ಅರ್ಜಿ ಸಲ್ಲಿಸಿದಂತ ಮಾಹಿತಿಯ ಆಧಾರದ ಮೇಲೆ ಹಣ ನೀಡಲಾಗುತ್ತದೆ. ಫೆನ್ಷನ್ ತೆಗೆದುಕೊಳ್ಳುತ್ತಿವವರಿಗೂ ಈ ಯೋಜನೆ ಅನ್ವಯವಾಗಲಿದೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago