ಗೃಹ ಲಕ್ಷ್ಮೀ : ಇದನ್ನು ಜಾರಿಗೊಳಿಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಬ್ಯಾಂಕ್ ಅಕೌಂಟ್ಸ್, ಆಧಾರ್ ಕಾರ್ಡ್ ಒದಗಿಸಬೇಕಾಗುತ್ತದೆ. ಯಾರು ಮನೆಯ ಯಜಮಾನಿ ಎಂಬುದು ತೀರ್ಮಾನಿಸಬೇಕಾಗಿದೆ. ನಾವು ಹೇಳಿರುವಂತದ್ದು ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ ಎಂದಿದ್ದೆವು. ಆದ್ದರಿಂದ ಅಕೌಂಟ್ ಮಾಹಿತಿ, ಆಧಾರ್ ಕಾರ್ಡ್, ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15ರ ಒಳಗಾಗಿ ಮನೆ ಒಡತಿಯ ಮಾಹಿತಿ ನೀಡಬೇಕು. ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಇದು ಆದಮೇಲೆ ಜುಲೈ 15ರಿಂದ ಆಗಸ್ಟ್ 15ರ ಒಳಗಡೆ ಪ್ರೋಸಸ್ ಮಾಡಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಮನೆಯ ಯಜಮಾನಿ ಖಾತೆಗೆ 2000 ರೂ ಜಮಾ ಮಾಡುತ್ತೇವೆ ಎಂದರು.
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ದಾರರ ಮನೆಯ ಒಡತಿಯ ಖಾತೆಗೆ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲಾಗುತ್ತದೆ. ಮನೆಯ ಯಜಮಾನಿ ಯಾರು ಎನ್ನುವ ಬಗ್ಗೆ ಕುಟುಂಬಸ್ಥರೇ ಮಾಹಿತಿಯನ್ನು ನೀಡಬೇಕು. ಆ ಮಾಹಿತಿ ಆಧಾರದ ಮೇಲೆ ಪ್ರತಿ ತಿಂಗಳು 2000 ರೂ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಹೇಳಿದರು.
ಜೂನ್ ತಿಂಗಳಿನಿಂದಲೇ ಗೃಹ ಲಕ್ಷ್ಮೀ ಯೋಜನೆ ಹಣ ನೀಡಬೇಕು ಎಂಬುದಾಗಿ ತೀರ್ಮಾನಿಸಲಾಗಿತ್ತು. ಆದ್ರೇ ಕೆಲ ತಾಂತ್ರಿಕ ಮಾಹಿತಿಯ ಕಾರಣದಿಂದಾಗಿ ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಆಗಸ್ಟ್ 15ರಿಂದ ಅರ್ಜಿ ಸಲ್ಲಿಸಿದಂತ ಮಾಹಿತಿಯ ಆಧಾರದ ಮೇಲೆ ಹಣ ನೀಡಲಾಗುತ್ತದೆ. ಫೆನ್ಷನ್ ತೆಗೆದುಕೊಳ್ಳುತ್ತಿವವರಿಗೂ ಈ ಯೋಜನೆ ಅನ್ವಯವಾಗಲಿದೆ ಎಂದರು.
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…