Featured

Congress ಗ್ಯಾರಂಟಿ : ಜೂ. 11ರಿಂದ ಎಸಿ, ಸ್ಲೀಪರ್ ಹಾಗೂ ಐಷಾರಾಮಿ ಬಸ್ಸುಗಳನ್ನು ಹೊರತುಪಡಿಸಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ – Vishwanews24

Congress ಗ್ಯಾರಂಟಿ : ಜೂ. 11ರಿಂದ ಎಸಿ, ಸ್ಲೀಪರ್ ಹಾಗೂ ಐಷಾರಾಮಿ ಬಸ್ಸುಗಳನ್ನು ಹೊರತುಪಡಿಸಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ..

ಶಕ್ತಿ ಗ್ಯಾರಂಟಿ ಯೋಜನೆ ಜಾರಿ : ಸಮಾಜದಲ್ಲಿ ಶೇ.50ರಷ್ಟು ಮಹಿಳೆಯರು ಇದ್ದಾರೆ. ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ನಾವು ಅದನ್ನು ಜೂನ್ 11ರಿಂದ ಲಾಂಚ್ ಮಾಡಲಾಗುತ್ತಿದೆ. ಈ ಕಾರ್ಯಕ್ರಮ ಕರ್ನಾಟಕ ರಾಜ್ಯದ ಒಳಗೆ ಸೀಮಿತವಾಗಿರುವಂತದ್ದು. ಇಲ್ಲಿಂದ ಬೆಂಗಳೂರು, ಬೀದರ್, ಕಾರವಾರ, ಮಂಗಳೂರು, ರಾಯಚೂರಿಗಾದರೂ ಹೋಗಬಹುದು. ಎಲ್ಲಿಗೆ ಸಾರಿಗೆ ಬಸ್ ಗಳಲ್ಲಿ ತೆರಳಿದರೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ ಎಂದರು.

ಯಾವುದು ಎಸಿ ಬಸ್ ಗಳಿದ್ದಾವೆ ಅವುಗಳನ್ನು ಬಿಟ್ಟು, ರಾಜಹಂಸ ಇರಬಹುದು, ಬೇರೆ ಬಸ್ ಇರಬಹುದು ಆ ಎಲ್ಲಾ ಬಸ್ ಗಳಲ್ಲಿ ಫ್ರೀಯಾಗಿ ಪ್ರಯಾಣ ಮಾಡಬಹುದು. ಆದರೇ ಬೆಂಗಳೂರಿನಿಂದ ತಿರುಪತಿಗೆ, ಹೈದರಾಬಾದ್ ಗೆ ಹೋಗುತ್ತೇವೆ ಎಂದರೆ ಇಲ್ಲ. ರಾಜ್ಯದ ಒಳಗೆ ಮತ್ತು ಕರ್ನಾಟಕವರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಎಸಿ ಮತ್ತು ನಾನ್ ಎಸಿ ಸ್ಲೀಪರ್ ಗಳಲ್ಲಿ ಪ್ರಯಾಣಿಸಲು ಅವಕಾಶವಿಲ್ಲ ಎಂದು ತಿಳಿಸಿದರು.

ಎಸಿ ಮತ್ತು ಲಕ್ಸೂರಿ ಬಸ್ ಹೊರತುಪಡಿಸಿ ಮಾಡಿದರೆ ಶೇ.94ರಷ್ಟು ಕವರ್ ಆಗಲಿದೆ. ಇವತ್ತು ಜಾರಿಗೆ ಕೊಡಲು ತೀರ್ಮಾನ ಮಾಡಲಾಗಿದೆ. ಜೂನ್ 11ನೇ ತಾರೀಕು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿದೆ. ಜೂನ್ 11ರಿಂದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ, ಕೆಎಸ್‌ಆರ್ ಟಿಸಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

40 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

46 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago