Featured

Delhi Assembly Election : 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ – vishwanews24

Delhi Assembly Election : 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

ನವದೆಹಲಿ: ವಿಧಾನಸಭೆ ಚುನಾವಣೆ  ಹಿನ್ನೆಲೆ ಕಾಂಗ್ರೆಸ್‌, ಆಪ್ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 29 ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಕಾಲ್ಕಾಜಿಯಲ್ಲಿ ಮುಖ್ಯಮಂತ್ರಿ ಅತಿಶಿ ವಿರುದ್ಧ ಹಿರಿಯ ನಾಯಕ ರಮೇಶ್ ಬಿಧುರಿ, ನವದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್  ವಿರುದ್ಧ ಮಾಜಿ ಸಂಸದ ಪರ್ವೇಶ ವರ್ಮಾ ಅವರನ್ನು ಕಣಕ್ಕಿಳಿಸಿದೆ.

ಬಿಜೆಪಿ ತನ್ನ ಗಾಂಧಿನಗರ ಶಾಸಕ ಅನಿಲ್ ಬಾಜ್‌ಪೇಯ್ ಅವರನ್ನು ಕೈಬಿಟ್ಟು ದೆಹಲಿಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿಗೆ ಟಿಕೆಟ್ ನೀಡಿದೆ. ಶೀಲಾ ದೀಕ್ಷಿತ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ 2003 ರಿಂದ 2013ರ ವರೆಗೆ ಸಚಿವರಾಗಿದ್ದ ಲವ್ಲಿ ಕಳೆದ ವರ್ಷ ಬಿಜೆಪಿ ಸೇರಿದ್ದರು. ಮತ್ತೋರ್ವ ದೆಹಲಿಯ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕರಾಗಿದ್ದ ರಾಜ್‌ಕುಮಾರ್ ಚೌಹಾಣ್ ಅವರಿಗೆ ಬಿಜೆಪಿ ಮಂಗೋಲ್‌ಪುರಿಯಿಂದ ಟಿಕೆಟ್ ನೀಡಲಾಗಿದೆ.

ಎಎಪಿ ಮಾಜಿ ಸಚಿವ, ಕೇಜ್ರಿವಾಲ್ ಆಪ್ತರಾಗಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿಯಿಂದ ನಜಾಫ್‌ಗಢ್ ಬದಲಿಗೆ ಬಿಜ್ವಾಸನ್‌ನಿಂದ ಕಣಕ್ಕಿಳಿದಿದ್ದರೆ, ರಾಜ್ ಕುಮಾರ್ ಆನಂದ್ ಪಟೇಲ್ ನಗರದಿಂದ ಟಿಕೆಟ್ ಪಡೆದಿದ್ದಾರೆ. ಎಎಪಿಯಿಂದ ಬಿಜೆಪಿಗೆ ತೆರಳಿದ್ದ ಶಾಸಕ ಕರ್ತಾರ್ ಸಿಂಗ್ ತನ್ವಾರ್ ಅವರ ಛತ್ತರ್‌ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ವಿಪಕ್ಷದ ನಾಯಕ ವಿಜೇಂದರ್ ಗುಪ್ತಾ, ಓಂ ಪ್ರಕಾಶ್ ಶರ್ಮಾ, ಅಜಯ್ ಮಹಾವರ್ ಮತ್ತು ಜಿತೇಂದರ್ ಮಹಾಜನ್ ಸೇರಿದಂತೆ ಬಿಜೆಪಿಯ ಹಾಲಿ ಶಾಸಕರು ಕ್ರಮವಾಗಿ ರೋಹಿಣಿ, ವಿಶ್ವಾಸ್ ನಗರ, ಘೋಂಡಾ ಮತ್ತು ರೋಹ್ತಾಸ್ ನಗರದಿಂದ ಸ್ಪರ್ಧಿಸಲಿದ್ದಾರೆ. ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಮಾಳವೀಯಾ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಮನೋಜ್ ಶೋಕೀನ್ ನಂಗ್ಲೋಯ್ ಜಾಟ್‌ನಿಂದ ಕಣಕ್ಕಿಳಿದಿದ್ದಾರೆ.

ಎಎಪಿ ಈಗಾಗಲೇ ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್ ಇದುವರೆಗೆ 47 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ‌.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

43 minutes ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

54 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

1 hour ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

2 hours ago