Featured

Delhi Assembly Election : 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ – vishwanews24

Delhi Assembly Election : 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

ನವದೆಹಲಿ: ವಿಧಾನಸಭೆ ಚುನಾವಣೆ  ಹಿನ್ನೆಲೆ ಕಾಂಗ್ರೆಸ್‌, ಆಪ್ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 29 ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಕಾಲ್ಕಾಜಿಯಲ್ಲಿ ಮುಖ್ಯಮಂತ್ರಿ ಅತಿಶಿ ವಿರುದ್ಧ ಹಿರಿಯ ನಾಯಕ ರಮೇಶ್ ಬಿಧುರಿ, ನವದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್  ವಿರುದ್ಧ ಮಾಜಿ ಸಂಸದ ಪರ್ವೇಶ ವರ್ಮಾ ಅವರನ್ನು ಕಣಕ್ಕಿಳಿಸಿದೆ.

ಬಿಜೆಪಿ ತನ್ನ ಗಾಂಧಿನಗರ ಶಾಸಕ ಅನಿಲ್ ಬಾಜ್‌ಪೇಯ್ ಅವರನ್ನು ಕೈಬಿಟ್ಟು ದೆಹಲಿಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿಗೆ ಟಿಕೆಟ್ ನೀಡಿದೆ. ಶೀಲಾ ದೀಕ್ಷಿತ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ 2003 ರಿಂದ 2013ರ ವರೆಗೆ ಸಚಿವರಾಗಿದ್ದ ಲವ್ಲಿ ಕಳೆದ ವರ್ಷ ಬಿಜೆಪಿ ಸೇರಿದ್ದರು. ಮತ್ತೋರ್ವ ದೆಹಲಿಯ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕರಾಗಿದ್ದ ರಾಜ್‌ಕುಮಾರ್ ಚೌಹಾಣ್ ಅವರಿಗೆ ಬಿಜೆಪಿ ಮಂಗೋಲ್‌ಪುರಿಯಿಂದ ಟಿಕೆಟ್ ನೀಡಲಾಗಿದೆ.

ಎಎಪಿ ಮಾಜಿ ಸಚಿವ, ಕೇಜ್ರಿವಾಲ್ ಆಪ್ತರಾಗಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿಯಿಂದ ನಜಾಫ್‌ಗಢ್ ಬದಲಿಗೆ ಬಿಜ್ವಾಸನ್‌ನಿಂದ ಕಣಕ್ಕಿಳಿದಿದ್ದರೆ, ರಾಜ್ ಕುಮಾರ್ ಆನಂದ್ ಪಟೇಲ್ ನಗರದಿಂದ ಟಿಕೆಟ್ ಪಡೆದಿದ್ದಾರೆ. ಎಎಪಿಯಿಂದ ಬಿಜೆಪಿಗೆ ತೆರಳಿದ್ದ ಶಾಸಕ ಕರ್ತಾರ್ ಸಿಂಗ್ ತನ್ವಾರ್ ಅವರ ಛತ್ತರ್‌ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ವಿಪಕ್ಷದ ನಾಯಕ ವಿಜೇಂದರ್ ಗುಪ್ತಾ, ಓಂ ಪ್ರಕಾಶ್ ಶರ್ಮಾ, ಅಜಯ್ ಮಹಾವರ್ ಮತ್ತು ಜಿತೇಂದರ್ ಮಹಾಜನ್ ಸೇರಿದಂತೆ ಬಿಜೆಪಿಯ ಹಾಲಿ ಶಾಸಕರು ಕ್ರಮವಾಗಿ ರೋಹಿಣಿ, ವಿಶ್ವಾಸ್ ನಗರ, ಘೋಂಡಾ ಮತ್ತು ರೋಹ್ತಾಸ್ ನಗರದಿಂದ ಸ್ಪರ್ಧಿಸಲಿದ್ದಾರೆ. ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಮಾಳವೀಯಾ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಮನೋಜ್ ಶೋಕೀನ್ ನಂಗ್ಲೋಯ್ ಜಾಟ್‌ನಿಂದ ಕಣಕ್ಕಿಳಿದಿದ್ದಾರೆ.

ಎಎಪಿ ಈಗಾಗಲೇ ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್ ಇದುವರೆಗೆ 47 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ‌.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

20 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

20 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

20 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

23 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

23 hours ago