ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಆಯ್ಕೆ ಶೀಘ್ರದಲ್ಲೇ ಆರಂಭವಾಗುತ್ತದೆ, ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಾಡಿಗೆದಾರರು ಸೇರಿ ಎಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ.
ಯಾವುದೇ ವದಂತಿಗೆ ಕಿವಿಗೊಡಬೇಡಿ . ನಾವು ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ ಪ್ರತಿ ತಿಂಗಳು 2000 ರೂ. ಜಮೆ ಮಾಡಲಾಗುತ್ತದೆ.ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಕಾಂಗ್ರೆಸ್ ಆಶಾಕಿರಣ ಮೂಡಿಸಿದೆ. ಕಾಂಗ್ರೆಸ್ ಕೊಟ್ಟ ಭರವಸೆಯನ್ನು ಈಡೇರಿಸುತ್ತೇವೆ. ಮನೆ ಮಾಲೀಕರು, ಬಾಡಿಗೆದಾರರಿಗೆ ಯಾವುದೇ ಆತಂಕ ಬೇಡ, ಎಲ್ಲರಿಗೂ ಉಚಿತ ವಿದ್ಯುತ್ ನೀಡುತ್ತೇವೆ ತಿಳಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಪ್ರತಿಪಕ್ಷಗಳು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ ಭರವಸೆ ಈಡೇರಿಸಿದ್ದೇವೆ. ಬಿಜೆಪಿಯವರು ಪ್ರತಿಭಟನೆಗೆ ನಾನು ಉತ್ತರ ಕೊಡಲು ಆಗಲ್ಲ. ಬಿಜೆಪಿಯವರು ಎಷ್ಟು ಭರವಸೆ ಕೊಟ್ಟಿದ್ದರು? ಬಿಜೆಪಿಯವರಿಗೆ ರಾಜ್ಯದ ಜನರಿಗೆ ಸರಿಯಾದ ಪಾಠ ಕಲಿಸಿದ್ದಾರೆ. ನಾವು ಕೊಟ್ಟ ಭರವಸೆಯನ್ನು ಖಂಡಿತವಾಗಿ ಈಡೇರಿಸುತ್ತೇವೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…