Featured

Health Tips : ಜೀರ್ಣಕ್ರಿಯೆಗೆ ಸಹಾಯಕವಾಗಿರುವ ಶುಂಠಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ -Vishwanews24

Health Tips : ಜೀರ್ಣಕ್ರಿಯೆಗೆ ಸಹಾಯಕವಾಗಿರುವ ಶುಂಠಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ -Vishwanews24

ಜೀರ್ಣಕ್ರಿಯೆಗೆ ಸಹಾಯಕವಾಗಿರುವ ಶುಂಠಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಿರುವಾಗ ಒಣಗಿಸಿದ ಶುಂಠಿ ಪುಡಿಯನ್ನು ಬಳಸುವುದು ಹೇಗೆ? ಎಂಬುದನ್ನು ತಿಳಿಯಿರಿ.

ಶುಂಠಿ ಎಲ್ಲರ ಅಡುಗೆ ಮನೆಯಲ್ಲಿಯೂ ಸಾಮಾನ್ಯವಾಗಿ ಇರುವ ಪದಾರ್ಥ. ನಮ್ಮ ಸುತ್ತಮುತ್ತಲು ಬೆಳೆಯುವ ಅದೆಷ್ಟೋ ಆಹಾರ ಪದಾರ್ಥಗಳಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ.

ಶುಂಠಿಯನ್ನು ಆಹಾರ ಪದಾರ್ಥಗಳಲ್ಲಿ ಮಾತ್ರವಲ್ಲದೇ ಬೆಳಿಗ್ಗೆಯ ಚಹ ಮಾಡಿಯೂ ಕೆಲವರು ಸವಿಯುತ್ತಾರೆ. ಸಾಮಾನ್ಯವಾದ ತಲೆನೋವು, ನೆಗಡಿ ಮತ್ತು ಜ್ವರಕ್ಕೆ ಶುಂಠಿ ಚಹ ಅಥವಾ ಕಷಾಯ ಉತ್ತಮ ಮಾರ್ಗ.

ಶುಂಠಿಯಲ್ಲಿ ಆಯಂಟಿ ಆಕ್ಸಿಡೆಂಟ್, ಆಯಂಟಿ ಬ್ಯಾಕ್ಟೀರಿಯಲ್, ಆಯಂಟಿ ಇನ್ಫ್ಲೋಮೋಟರಿ ಗುಣಗಳಿರುತ್ತದೆ. ಜತೆಗೆ ಸತವು ಅಂಶ ಕೂಡ ಕಂಡು ಬರುತ್ತದೆ. ಸಾಮಾನ್ಯವಾಗಿ ಶುಂಠಿಯನ್ನು ಒಣಗಿಸಿ ಪುಡಿ ಮಾಡಿಯೂ ಸಹ ಶೇಖರಿಸಿಡಬಹುದು.

ಆರೋಗ್ಯ ಸುಧಾರಣೆಗೆ ಸಂಬಂಧಿಸಿದಂತೆ ಆಯುರ್ವೇದದಲ್ಲಿಯೂ ಶುಂಠಿಗೆ ಪ್ರಮುಖ ಸ್ಥಾನವಿದೆ. ಜೀರ್ಣಕ್ರಿಯೆಗೆ ಸಹಾಯಕವಾಗಿರುವ ಶುಂಠಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಿರುವಾಗ ಒಣಗಿಸಿದ ಶುಂಠಿ ಪುಡಿಯನ್ನು ಬಳಸುವುದು ಹೇಗೆ? ಎಂಬುದನ್ನು ತಿಳಿಯಿರಿ.

ಶುಂಠಿ ಪುಡಿಯನ್ನು ನೀರಿಗೆ ಸೇರಿಸಿ ಕುಡಿಯುವುದರ ಜತೆಗೆ ಲವಂಗ ಹಾಗೂ ಉಪ್ಪನ್ನು ಮಿಶ್ರಣ ಮಾಡುವುದರಿಂದ ಒಳ್ಳೆಯ ರುಚಿ ಸಿಗುತ್ತದೆ. ದಿನಕ್ಕೆ ಒಂದು ಬಾರಿಯಾದರೂ ಈ ಮಿಶ್ರಣವನ್ನು ಸೇವಿಸುವ ಮೂಲಕ ಹೊಟ್ಟೆಯನ್ನು ಶುದ್ಧವಾಗಿಟ್ಟುಕೊಳ್ಳಬಹುದಾಗಿದೆ.

ಮನೆಯಲ್ಲಿ ಶುಂಠಿ ಪುಡಿಯನ್ನು ತಯಾರಿಸುವುದು ಹೇಗೆ?

ಔಷಧೀಯ ಗುಣಗಳಿಂದಾಗಿ ಹೆಚ್ಚಿನ ಮನೆಯಲ್ಲಿ ಶುಂಠಿಯನ್ನು ಬೆಳೆಯುತ್ತಾರೆ. ಹೀಗಿರುವಾಗ ಶುಂಠಿ ಪುಡಿ ಮಾಡಿಯೂ ಶೇಖರಿಸಿ ಇಟ್ಟುಕೊಳ್ಳಬಹುದಾಗಿದೆ. ಹೇಗೆ ಎಂಬುದು ಈ ಕೆಳಗಿನಂತಿದೆ:

ತಾಜಾ ಶುಂಠಿಯನ್ನು ಸ್ವಚ್ಛವಾಗಿ ತೊಳೆದು ಇಟ್ಟುಕೊಳ್ಳಿ

ತೆಳುವಾದ ಹೋಳುಗಳನ್ನಾಗಿ ಕತ್ತರಿಸಿ 2 ರಿಂದ 4 ದಿನಗಳವರೆಗೆ ಹಾಗೆಯೇ ಇಡಿ

4 ದಿನಗಳವರೆಗೆ ಬಿಸಿಲಿನಲ್ಲಿ ಒಣಗಿಸಿ

ಶುಂಠಿ ಚೆನ್ನಾಗಿ ಒಣಗಿದ ಬಳಿಕ ಮಿಕ್ಸಿಯಲ್ಲಿ ಗ್ರೈಂಡರ್ ಮಾಡಿ

ಬೆಚ್ಚಗಿನ ಕರಡಿಗೆಯಲ್ಲಿ ಶೇಖರಿಸಿ ಇಟ್ಟುಕೊಂಡು ಯಾವಾಗ ಬೇಕೋ ಆವಾಗ ಉಪಯೋಗಿಸಿಕೊಳ್ಳಬಹುದು

ಯಾವಾಗಲೂ ಮುಖ್ಯವಾಗಿ ನೆನಪಿಡುವ ವಿಷಯವೆಂದರೆ, ಅತಿಯಾಗಿ ಸೇವಿಸಿದರೆ ಅಮೃತವೂ ವಿಷ ಎಂಬಂತೆ ಯಾವುದೇ ಆಹಾರ ಪದಾರ್ಥಗಳು ಆರೋಗ್ಯಕ್ಕೆ ಒಳ್ಳೆಯದು ಎಂದು ಅತಿಯಾಗಿ ಸೇವಿಸಿದರೆ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಹಾಗಾಗಿ ಹಿತ ಮಿತವಾಗಿ ಸೇವಿಸಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

1 day ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

1 day ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

1 day ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

1 day ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

1 day ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

1 day ago