Featured

Health Tips : ಜೀರ್ಣಕ್ರಿಯೆಗೆ ಸಹಾಯಕವಾಗಿರುವ ಶುಂಠಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ -Vishwanews24

Health Tips : ಜೀರ್ಣಕ್ರಿಯೆಗೆ ಸಹಾಯಕವಾಗಿರುವ ಶುಂಠಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ -Vishwanews24

ಜೀರ್ಣಕ್ರಿಯೆಗೆ ಸಹಾಯಕವಾಗಿರುವ ಶುಂಠಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಿರುವಾಗ ಒಣಗಿಸಿದ ಶುಂಠಿ ಪುಡಿಯನ್ನು ಬಳಸುವುದು ಹೇಗೆ? ಎಂಬುದನ್ನು ತಿಳಿಯಿರಿ.

ಶುಂಠಿ ಎಲ್ಲರ ಅಡುಗೆ ಮನೆಯಲ್ಲಿಯೂ ಸಾಮಾನ್ಯವಾಗಿ ಇರುವ ಪದಾರ್ಥ. ನಮ್ಮ ಸುತ್ತಮುತ್ತಲು ಬೆಳೆಯುವ ಅದೆಷ್ಟೋ ಆಹಾರ ಪದಾರ್ಥಗಳಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ.

ಶುಂಠಿಯನ್ನು ಆಹಾರ ಪದಾರ್ಥಗಳಲ್ಲಿ ಮಾತ್ರವಲ್ಲದೇ ಬೆಳಿಗ್ಗೆಯ ಚಹ ಮಾಡಿಯೂ ಕೆಲವರು ಸವಿಯುತ್ತಾರೆ. ಸಾಮಾನ್ಯವಾದ ತಲೆನೋವು, ನೆಗಡಿ ಮತ್ತು ಜ್ವರಕ್ಕೆ ಶುಂಠಿ ಚಹ ಅಥವಾ ಕಷಾಯ ಉತ್ತಮ ಮಾರ್ಗ.

ಶುಂಠಿಯಲ್ಲಿ ಆಯಂಟಿ ಆಕ್ಸಿಡೆಂಟ್, ಆಯಂಟಿ ಬ್ಯಾಕ್ಟೀರಿಯಲ್, ಆಯಂಟಿ ಇನ್ಫ್ಲೋಮೋಟರಿ ಗುಣಗಳಿರುತ್ತದೆ. ಜತೆಗೆ ಸತವು ಅಂಶ ಕೂಡ ಕಂಡು ಬರುತ್ತದೆ. ಸಾಮಾನ್ಯವಾಗಿ ಶುಂಠಿಯನ್ನು ಒಣಗಿಸಿ ಪುಡಿ ಮಾಡಿಯೂ ಸಹ ಶೇಖರಿಸಿಡಬಹುದು.

ಆರೋಗ್ಯ ಸುಧಾರಣೆಗೆ ಸಂಬಂಧಿಸಿದಂತೆ ಆಯುರ್ವೇದದಲ್ಲಿಯೂ ಶುಂಠಿಗೆ ಪ್ರಮುಖ ಸ್ಥಾನವಿದೆ. ಜೀರ್ಣಕ್ರಿಯೆಗೆ ಸಹಾಯಕವಾಗಿರುವ ಶುಂಠಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಿರುವಾಗ ಒಣಗಿಸಿದ ಶುಂಠಿ ಪುಡಿಯನ್ನು ಬಳಸುವುದು ಹೇಗೆ? ಎಂಬುದನ್ನು ತಿಳಿಯಿರಿ.

ಶುಂಠಿ ಪುಡಿಯನ್ನು ನೀರಿಗೆ ಸೇರಿಸಿ ಕುಡಿಯುವುದರ ಜತೆಗೆ ಲವಂಗ ಹಾಗೂ ಉಪ್ಪನ್ನು ಮಿಶ್ರಣ ಮಾಡುವುದರಿಂದ ಒಳ್ಳೆಯ ರುಚಿ ಸಿಗುತ್ತದೆ. ದಿನಕ್ಕೆ ಒಂದು ಬಾರಿಯಾದರೂ ಈ ಮಿಶ್ರಣವನ್ನು ಸೇವಿಸುವ ಮೂಲಕ ಹೊಟ್ಟೆಯನ್ನು ಶುದ್ಧವಾಗಿಟ್ಟುಕೊಳ್ಳಬಹುದಾಗಿದೆ.

ಮನೆಯಲ್ಲಿ ಶುಂಠಿ ಪುಡಿಯನ್ನು ತಯಾರಿಸುವುದು ಹೇಗೆ?

ಔಷಧೀಯ ಗುಣಗಳಿಂದಾಗಿ ಹೆಚ್ಚಿನ ಮನೆಯಲ್ಲಿ ಶುಂಠಿಯನ್ನು ಬೆಳೆಯುತ್ತಾರೆ. ಹೀಗಿರುವಾಗ ಶುಂಠಿ ಪುಡಿ ಮಾಡಿಯೂ ಶೇಖರಿಸಿ ಇಟ್ಟುಕೊಳ್ಳಬಹುದಾಗಿದೆ. ಹೇಗೆ ಎಂಬುದು ಈ ಕೆಳಗಿನಂತಿದೆ:

ತಾಜಾ ಶುಂಠಿಯನ್ನು ಸ್ವಚ್ಛವಾಗಿ ತೊಳೆದು ಇಟ್ಟುಕೊಳ್ಳಿ

ತೆಳುವಾದ ಹೋಳುಗಳನ್ನಾಗಿ ಕತ್ತರಿಸಿ 2 ರಿಂದ 4 ದಿನಗಳವರೆಗೆ ಹಾಗೆಯೇ ಇಡಿ

4 ದಿನಗಳವರೆಗೆ ಬಿಸಿಲಿನಲ್ಲಿ ಒಣಗಿಸಿ

ಶುಂಠಿ ಚೆನ್ನಾಗಿ ಒಣಗಿದ ಬಳಿಕ ಮಿಕ್ಸಿಯಲ್ಲಿ ಗ್ರೈಂಡರ್ ಮಾಡಿ

ಬೆಚ್ಚಗಿನ ಕರಡಿಗೆಯಲ್ಲಿ ಶೇಖರಿಸಿ ಇಟ್ಟುಕೊಂಡು ಯಾವಾಗ ಬೇಕೋ ಆವಾಗ ಉಪಯೋಗಿಸಿಕೊಳ್ಳಬಹುದು

ಯಾವಾಗಲೂ ಮುಖ್ಯವಾಗಿ ನೆನಪಿಡುವ ವಿಷಯವೆಂದರೆ, ಅತಿಯಾಗಿ ಸೇವಿಸಿದರೆ ಅಮೃತವೂ ವಿಷ ಎಂಬಂತೆ ಯಾವುದೇ ಆಹಾರ ಪದಾರ್ಥಗಳು ಆರೋಗ್ಯಕ್ಕೆ ಒಳ್ಳೆಯದು ಎಂದು ಅತಿಯಾಗಿ ಸೇವಿಸಿದರೆ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಹಾಗಾಗಿ ಹಿತ ಮಿತವಾಗಿ ಸೇವಿಸಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

13 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

13 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

14 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

16 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

16 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

16 hours ago