ಭಾರತದಲ್ಲಿ ತುಳಸಿಯನ್ನು ಪೂಜ್ಯ ಸಸ್ಯವೆಂದು ಪರಿಗಣಿಸಲಾಗಿದೆ. ಅಷ್ಟೇ ಅಲ್ಲ ತುಳಸಿ ಗಿಡಕ್ಕೆ ತನ್ನದೇ ಆದ ಧಾರ್ಮಿಕ ಮತ್ತು ಆಯುರ್ವೇದದ ಪ್ರಾಮುಖ್ಯತೆ ಇದೆ. ಹಿಂದೂ ಧರ್ಮದಲ್ಲಿ ತುಳಸಿ ಪೂಜೆಗೆ ಮಹತ್ವವನ್ನು ನೀಡಲಾಗುತ್ತದೆ.
ತುಳಸಿಯನ್ನು ಪೂಜಿಸುವುದರಿಂದ ಸಂತೋಷ ಮತ್ತು ಸಮೃದ್ಧಿ ದೊರೆಯುತ್ತದೆ ಎಂಬ ನಂಬಿಕೆಯಿದೆ. ಮನೆಯಲ್ಲಿ ತುಳಸಿ ಗಿಡ ಇಡುವುದು ತುಂಬಾ ಮಂಗಳಕರ ಎನ್ನಲಾಗಿದೆ. ಧಾರ್ಮಿಕ ಪ್ರಾಮುಖ್ಯತೆಯ ಹೊರತಾಗಿ ತುಳಸಿಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ (Tulsi Health Benefits) ಎಂದು ಸಾಬೀತಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಹಲವು ಪ್ರಯೋಜನಗಳು ದೊರೆಯುತ್ತವೆ.
ಪ್ರತಿದಿನ ನಾವು ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಎಂದು ತಿಳಿಯೋಣ…
>> ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದು ಶೀತ ಮತ್ತು ಗಂಟಲು ನೋವಿನ ಸಮಸ್ಯೆಯಿಂದ ಪರಿಹಾರ ಸಿಗಲಿದೆ.
>> ಡಯಾಬಿಟಿಸ್ ರೋಗಿಗಳು ನಿತ್ಯ ಖಾಲಿ ಹೊಟ್ಟೆಯಲ್ಲಿ ತುಳಿಸಿ ನೀರನ್ನು ಸೇವಿಸುವುದುದರಿಂದ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.
>> ಪ್ರತಿನಿತ್ಯ ತುಳಸಿ ನೀರನ್ನು ಕುಡಿಯುವುದರಿಂದ ದೇಹದಿಂದ ವಿಷಕಾರಿ ವಸ್ತುಗಳನ್ನು ತೆಗೆದುಹಾಕುತ್ತದೆ.
>> ನಿತ್ಯ ತುಳಸಿ ನೀರಿನ ಸೇವನೆಯು (Tulsi Water) ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
>> ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ. ಮಲಬದ್ಧತೆ ಮತ್ತು ಸಡಿಲ ಚಲನೆಯ ಸಮಸ್ಯೆ ಕೂಡ ಪರಿಹಾರವಾಗುತ್ತದೆ. ಇದಲ್ಲದೇ ಹೊಟ್ಟೆ ಕೂಡ ಚೆನ್ನಾಗಿರುತ್ತದೆ.
>> ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಜ್ವರ ಕೂಡ ಗುಣವಾಗುತ್ತದೆ. ಇದರ ಹೊರತಾಗಿ ವೈರಲ್ ಸೋಂಕಿನ ಸಮಸ್ಯೆಗಳನ್ನು ತಪ್ಪಿಸಬಹುದು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…