ಭಾರತದಲ್ಲಿ ತುಳಸಿಯನ್ನು ಪೂಜ್ಯ ಸಸ್ಯವೆಂದು ಪರಿಗಣಿಸಲಾಗಿದೆ. ಅಷ್ಟೇ ಅಲ್ಲ ತುಳಸಿ ಗಿಡಕ್ಕೆ ತನ್ನದೇ ಆದ ಧಾರ್ಮಿಕ ಮತ್ತು ಆಯುರ್ವೇದದ ಪ್ರಾಮುಖ್ಯತೆ ಇದೆ. ಹಿಂದೂ ಧರ್ಮದಲ್ಲಿ ತುಳಸಿ ಪೂಜೆಗೆ ಮಹತ್ವವನ್ನು ನೀಡಲಾಗುತ್ತದೆ.
ತುಳಸಿಯನ್ನು ಪೂಜಿಸುವುದರಿಂದ ಸಂತೋಷ ಮತ್ತು ಸಮೃದ್ಧಿ ದೊರೆಯುತ್ತದೆ ಎಂಬ ನಂಬಿಕೆಯಿದೆ. ಮನೆಯಲ್ಲಿ ತುಳಸಿ ಗಿಡ ಇಡುವುದು ತುಂಬಾ ಮಂಗಳಕರ ಎನ್ನಲಾಗಿದೆ. ಧಾರ್ಮಿಕ ಪ್ರಾಮುಖ್ಯತೆಯ ಹೊರತಾಗಿ ತುಳಸಿಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ (Tulsi Health Benefits) ಎಂದು ಸಾಬೀತಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಹಲವು ಪ್ರಯೋಜನಗಳು ದೊರೆಯುತ್ತವೆ.
ಪ್ರತಿದಿನ ನಾವು ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಎಂದು ತಿಳಿಯೋಣ…
>> ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದು ಶೀತ ಮತ್ತು ಗಂಟಲು ನೋವಿನ ಸಮಸ್ಯೆಯಿಂದ ಪರಿಹಾರ ಸಿಗಲಿದೆ.
>> ಡಯಾಬಿಟಿಸ್ ರೋಗಿಗಳು ನಿತ್ಯ ಖಾಲಿ ಹೊಟ್ಟೆಯಲ್ಲಿ ತುಳಿಸಿ ನೀರನ್ನು ಸೇವಿಸುವುದುದರಿಂದ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.
>> ಪ್ರತಿನಿತ್ಯ ತುಳಸಿ ನೀರನ್ನು ಕುಡಿಯುವುದರಿಂದ ದೇಹದಿಂದ ವಿಷಕಾರಿ ವಸ್ತುಗಳನ್ನು ತೆಗೆದುಹಾಕುತ್ತದೆ.
>> ನಿತ್ಯ ತುಳಸಿ ನೀರಿನ ಸೇವನೆಯು (Tulsi Water) ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
>> ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ. ಮಲಬದ್ಧತೆ ಮತ್ತು ಸಡಿಲ ಚಲನೆಯ ಸಮಸ್ಯೆ ಕೂಡ ಪರಿಹಾರವಾಗುತ್ತದೆ. ಇದಲ್ಲದೇ ಹೊಟ್ಟೆ ಕೂಡ ಚೆನ್ನಾಗಿರುತ್ತದೆ.
>> ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಜ್ವರ ಕೂಡ ಗುಣವಾಗುತ್ತದೆ. ಇದರ ಹೊರತಾಗಿ ವೈರಲ್ ಸೋಂಕಿನ ಸಮಸ್ಯೆಗಳನ್ನು ತಪ್ಪಿಸಬಹುದು.
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…