Featured

HMPV ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ ; ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್ – vishwanews24

ಭಾರತದಲ್ಲಿ HMPV ವೈರಸ್​ ಇದು ಹೊಸದೇನಲ್ಲ ಬಹಳ ವರ್ಷಗಳಿಂದ ಇದೆ ..

HMPV ವೈರಸ್​​ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ ..

ಶೀತ, ಕೆಮ್ಮು, ಕಫ ಇಂತಹ ಆರೋಗ್ಯ ಲಕ್ಷಣ HMPV ಪ್ರಕರಣವಲ್ಲ

ಮಾಸ್ಕ್ ಹಾಕಬೇಕು, ಲಾಕ್ ಡೌನ್ ಮಾಡಬೇಕು ಅಂತಾ ಯಾವುದು ಇಲ್ಲ ..ಎಚ್ಚರಿಕೆಯಿಂದ ಇರಬೇಕು

ಬೆಂಗಳೂರು :  ಬೆಂಗಳೂರಿನಲ್ಲಿ ಹೆಚ್​​ ಎಂಪಿ ವೈರಸ್ (HMPV) ಪತ್ತೆಯಾಗಿದ್ದು, ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಚ್ಎಂಪಿ ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ, ಆದರೆ ಮುಂಜಾಗ್ರತೆ ವಹಿಸಬೇಕು ಎಂದಿದ್ದಾರೆ.

ಆರೋಗ್ಯ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಹೆಚ್​​ಎಂಪಿ ವೈರಸ್​ ಇದು ಹೊಸದೇನಲ್ಲ. ಬಹಳ ವರ್ಷಗಳಿಂದ ಹೆಚ್​​ಎಂಪಿ ವೈರಸ್ ವಿಶ್ವದಾದ್ಯಂತ ಇದೆ. ಹೆಚ್​​ಎಂಪಿ ವೈರಸ್​​ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ತಿಳಿಸಿದ್ದಾರೆ.

ಚೀನಾದಲ್ಲಿ ಮ್ಯೂಟೆಟ್​ ಆಗಿದೆಯೋ ಏನೋ ನನಗೆ ಗೊತ್ತಿಲ್ಲ. ಚೀನಾದಲ್ಲಿನ ವೈರಸ್ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು. ದೇಶದಲ್ಲಿ ಹೆಚ್​​ಎಂಪಿ ವೈರಸ್​ ರೀತಿ ನೂರಾರು ವೈರಸ್​ಗಳಿವೆ. 2001ರಲ್ಲಿ ಪ್ರಥಮ ಬಾರಿಗೆ ಹೆಚ್ಎಂಪಿ ವೈರಸ್ ಪತ್ತೆಹಚ್ಚಲಾಗಿದೆ. 8 ತಿಂಗಳ ಮಗು ನಾರ್ಮಲ್ ಆಗಿದೆ. ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಮಗು ಡಿಸ್ಚಾರ್ಜ್​ ಆಗಲಿದೆ ಎಂದು ಹೇಳಿದ್ದಾರೆ.

ಈ ಆರೋಗ್ಯ ಲಕ್ಷಣಗಳು ಹೆಚ್ಎಂಪಿವಿ ಪ್ರಕರಣವಲ್ಲ
ಕರ್ನಾಟಕದಲ್ಲಿ 2 ಲಕ್ಷ 36 ಸಾವಿರ ಐಎಲ್ಐ ಕೇಸ್​ಗಳಿವೆ. ಐಎಲ್ಐ ಕೇಸ್​ನಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಪುದುಚೆರಿ, ಗುಜರಾತ್​ನಲ್ಲಿ ಹೆಚ್ಎಂಪಿ ವೈರಸ್ ಪ್ರಕರಣವಿದೆ. ಕೇಂದ್ರ ಸರ್ಕಾರದ ಮಾಹಿತಿ ಅನ್ವಯ ಐಎಲ್​​ಐ ಕೇಸ್ ಹೆಚ್ಚಾಗಿಲ್ಲ. ಚಳಿಗಾಲದಲ್ಲಿ ಸಹಜವಾಗಿ ಶೀತ, ಕೆಮ್ಮು, ಕಫ ಇದ್ದೇ ಇರುತ್ತೆ. ಆದರೆ ಇಂತಹ ಆರೋಗ್ಯ ಲಕ್ಷಣ ಹೆಚ್ಎಂಪಿವಿ ಪ್ರಕರಣವಲ್ಲ. ರಾಜ್ಯ ಆರೋಗ್ಯ ಇಲಾಖೆಯಲ್ಲಿ ಹಣಕಾಸಿನ ಕೊರತೆಯಿಲ್ಲ. ವೈದ್ಯಕೀಯ ಪರಿಕರ ಖರೀದಿ ಸಹಜವಾಗಿಯೇ ನಡೆಯುತ್ತಿದೆ. ಆಯಾ ಆಸ್ಪತ್ರೆಗಳಿಂದಲೇ ವೈದ್ಯಕೀಯ ಸಾಮಗ್ರಿ ಖರೀದಿ ಮಾಡಲಾಗುವುದು ಎಂದಿದ್ದಾರೆ.

ಕೇಂದ್ರ ಸರ್ಕಾರ ಐಸಿಎಂಆರ್ ಸರ್ವಲೆನ್ಸ್ ಮಾಡುತ್ತಿದೆ. ಐಸಿಎಂಆರ್ ಪ್ರಕಾರ ಶೇ 1ರಷ್ಟು ಹೆಚ್​​​​ಎಂಪಿವಿ ಬರುತ್ತದೆ. ಈ ವೈರಸ್​​ನಿಂದ ಮರಣ ಪ್ರಮಾಣ ಕಡಿಮೆ. ಬಂದ ಬಳಿಕ ಗುಣಮುಖರಾಗುತ್ತಾರೆ. ಹೆಚ್​​​​ಎಂಪಿವಿ ಬಂದ ಎರಡು ಮಕ್ಕಳು ಗುಣಮುಖರಾಗಿದ್ದಾರೆ. ಮಾಸ್ಕ್ ಹಾಕಬೇಕು, ಲಾಕ್ ಡೌನ್ ಮಾಡಬೇಕು ಅಂತಾ ಯಾವುದು ಇಲ್ಲ. ಎಚ್ಚರಿಕೆಯಿಂದ ಇರಬೇಕು ಅಷ್ಟೇ. ಈಗಾಗಲೇ ನಾವು ಕೂಡ ಮಾರ್ಗಸೂಚಿ ಹೇಳಿದ್ದೇವೆ. ಏನು ಮಾಡಬೇಕು, ಏನು ಮಾಡಬಾರದು ಅಂತಾ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

27 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

38 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

45 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

1 hour ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

1 hour ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago