Featured

HMPV ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ ; ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್ – vishwanews24

ಭಾರತದಲ್ಲಿ HMPV ವೈರಸ್​ ಇದು ಹೊಸದೇನಲ್ಲ ಬಹಳ ವರ್ಷಗಳಿಂದ ಇದೆ ..

HMPV ವೈರಸ್​​ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ ..

ಶೀತ, ಕೆಮ್ಮು, ಕಫ ಇಂತಹ ಆರೋಗ್ಯ ಲಕ್ಷಣ HMPV ಪ್ರಕರಣವಲ್ಲ

ಮಾಸ್ಕ್ ಹಾಕಬೇಕು, ಲಾಕ್ ಡೌನ್ ಮಾಡಬೇಕು ಅಂತಾ ಯಾವುದು ಇಲ್ಲ ..ಎಚ್ಚರಿಕೆಯಿಂದ ಇರಬೇಕು

ಬೆಂಗಳೂರು :  ಬೆಂಗಳೂರಿನಲ್ಲಿ ಹೆಚ್​​ ಎಂಪಿ ವೈರಸ್ (HMPV) ಪತ್ತೆಯಾಗಿದ್ದು, ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಚ್ಎಂಪಿ ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ, ಆದರೆ ಮುಂಜಾಗ್ರತೆ ವಹಿಸಬೇಕು ಎಂದಿದ್ದಾರೆ.

ಆರೋಗ್ಯ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಹೆಚ್​​ಎಂಪಿ ವೈರಸ್​ ಇದು ಹೊಸದೇನಲ್ಲ. ಬಹಳ ವರ್ಷಗಳಿಂದ ಹೆಚ್​​ಎಂಪಿ ವೈರಸ್ ವಿಶ್ವದಾದ್ಯಂತ ಇದೆ. ಹೆಚ್​​ಎಂಪಿ ವೈರಸ್​​ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ತಿಳಿಸಿದ್ದಾರೆ.

ಚೀನಾದಲ್ಲಿ ಮ್ಯೂಟೆಟ್​ ಆಗಿದೆಯೋ ಏನೋ ನನಗೆ ಗೊತ್ತಿಲ್ಲ. ಚೀನಾದಲ್ಲಿನ ವೈರಸ್ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು. ದೇಶದಲ್ಲಿ ಹೆಚ್​​ಎಂಪಿ ವೈರಸ್​ ರೀತಿ ನೂರಾರು ವೈರಸ್​ಗಳಿವೆ. 2001ರಲ್ಲಿ ಪ್ರಥಮ ಬಾರಿಗೆ ಹೆಚ್ಎಂಪಿ ವೈರಸ್ ಪತ್ತೆಹಚ್ಚಲಾಗಿದೆ. 8 ತಿಂಗಳ ಮಗು ನಾರ್ಮಲ್ ಆಗಿದೆ. ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಮಗು ಡಿಸ್ಚಾರ್ಜ್​ ಆಗಲಿದೆ ಎಂದು ಹೇಳಿದ್ದಾರೆ.

ಈ ಆರೋಗ್ಯ ಲಕ್ಷಣಗಳು ಹೆಚ್ಎಂಪಿವಿ ಪ್ರಕರಣವಲ್ಲ
ಕರ್ನಾಟಕದಲ್ಲಿ 2 ಲಕ್ಷ 36 ಸಾವಿರ ಐಎಲ್ಐ ಕೇಸ್​ಗಳಿವೆ. ಐಎಲ್ಐ ಕೇಸ್​ನಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಪುದುಚೆರಿ, ಗುಜರಾತ್​ನಲ್ಲಿ ಹೆಚ್ಎಂಪಿ ವೈರಸ್ ಪ್ರಕರಣವಿದೆ. ಕೇಂದ್ರ ಸರ್ಕಾರದ ಮಾಹಿತಿ ಅನ್ವಯ ಐಎಲ್​​ಐ ಕೇಸ್ ಹೆಚ್ಚಾಗಿಲ್ಲ. ಚಳಿಗಾಲದಲ್ಲಿ ಸಹಜವಾಗಿ ಶೀತ, ಕೆಮ್ಮು, ಕಫ ಇದ್ದೇ ಇರುತ್ತೆ. ಆದರೆ ಇಂತಹ ಆರೋಗ್ಯ ಲಕ್ಷಣ ಹೆಚ್ಎಂಪಿವಿ ಪ್ರಕರಣವಲ್ಲ. ರಾಜ್ಯ ಆರೋಗ್ಯ ಇಲಾಖೆಯಲ್ಲಿ ಹಣಕಾಸಿನ ಕೊರತೆಯಿಲ್ಲ. ವೈದ್ಯಕೀಯ ಪರಿಕರ ಖರೀದಿ ಸಹಜವಾಗಿಯೇ ನಡೆಯುತ್ತಿದೆ. ಆಯಾ ಆಸ್ಪತ್ರೆಗಳಿಂದಲೇ ವೈದ್ಯಕೀಯ ಸಾಮಗ್ರಿ ಖರೀದಿ ಮಾಡಲಾಗುವುದು ಎಂದಿದ್ದಾರೆ.

ಕೇಂದ್ರ ಸರ್ಕಾರ ಐಸಿಎಂಆರ್ ಸರ್ವಲೆನ್ಸ್ ಮಾಡುತ್ತಿದೆ. ಐಸಿಎಂಆರ್ ಪ್ರಕಾರ ಶೇ 1ರಷ್ಟು ಹೆಚ್​​​​ಎಂಪಿವಿ ಬರುತ್ತದೆ. ಈ ವೈರಸ್​​ನಿಂದ ಮರಣ ಪ್ರಮಾಣ ಕಡಿಮೆ. ಬಂದ ಬಳಿಕ ಗುಣಮುಖರಾಗುತ್ತಾರೆ. ಹೆಚ್​​​​ಎಂಪಿವಿ ಬಂದ ಎರಡು ಮಕ್ಕಳು ಗುಣಮುಖರಾಗಿದ್ದಾರೆ. ಮಾಸ್ಕ್ ಹಾಕಬೇಕು, ಲಾಕ್ ಡೌನ್ ಮಾಡಬೇಕು ಅಂತಾ ಯಾವುದು ಇಲ್ಲ. ಎಚ್ಚರಿಕೆಯಿಂದ ಇರಬೇಕು ಅಷ್ಟೇ. ಈಗಾಗಲೇ ನಾವು ಕೂಡ ಮಾರ್ಗಸೂಚಿ ಹೇಳಿದ್ದೇವೆ. ಏನು ಮಾಡಬೇಕು, ಏನು ಮಾಡಬಾರದು ಅಂತಾ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

8 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

12 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

14 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

15 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

16 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

16 hours ago