Featured

ಐದು ವರ್ಷ ಬಿಜೆಪಿ ಶಾಸಕರಿದ್ದರೂ ಇನ್ನೂ ಅನುಷ್ಠಾನಗೊಂಡಿಲ್ಲ ಕಾಪು ನಗರಾಭಿವೃದ್ದಿ ಪ್ರಾಧಿಕಾರದ ಮಾಸ್ಟರ್ ಪ್ಲ್ಯಾನ್..!! vishwanews24

ಐದು ವರ್ಷ ಬಿಜೆಪಿ ಶಾಸಕರಿದ್ದರೂ ಇನ್ನೂ ಅನುಷ್ಠಾನಗೊಂಡಿಲ್ಲ ಕಾಪು ನಗರಾಭಿವೃದ್ದಿ

ಪ್ರಾಧಿಕಾರದ ಮಾಸ್ಟರ್ ಪ್ಲ್ಯಾನ್..!!

 

ಚುನಾವಣೆಯ ಮುನ್ನಾ ನೀಡಿದ್ದ ಭರವಸೇ ಸುಳ್ಳಾಯಿತೆ…???

ಕಾಪು: ಇಲ್ಲಿನ ಪುರಸಭೆ ವ್ಯಾಪ್ತಿ ಮಾತ್ರವಲ್ಲದೆ ಸ್ಥಳಿಯ ಪಂಚಾಯತ್ ವ್ಯವಸ್ಥೆಯೊಳಗೆ ಸೇರಿಕೊಂಡಿರುವ ಕಾಪು ನಗರಾಭಿವೃದ್ದಿ ಪ್ರಾಧಿಕಾರದ ಕಾನೂನು ತೊಡಕುಗಳು ಸದ್ಯ ಸರಿಯಾಗುವ ಲಕ್ಷಣಗಳು ಕಾಣುತ್ತಿಲ್ಲ ಇದರಿಂದಾಗಿ ಮುಂದಿನ ಚುನಾವಣೆ ನಡೆದು ಹೊಸ ಸರ್ಕಾರ ಬರುವವರೆಗೂ ಜನಸಾಮಾನ್ಯರು ಜಾತಕಪಕ್ಷಿಯಂತೆ ಕಾಯುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಪುವಿಗೆ ಬಿಜೆಪಿ ಶಾಸಕ ಆಡಳಿತ ಬಂದರೆ ಪ್ರಾಧಿಕಾರದ ಕಾನೂನು ತೊಡಕು ಮತ್ತು ಮಾಸ್ಟರ್ ಪ್ಲ್ಯಾನ್ ನಡೆಸಿ ಜನರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವ ನೀಡಿದ್ದ ಭರವಸೆ ಸದ್ಯ ಸುಳ್ಳಾಗಿದೆ ಮುಂದಿನ ಚುನಾವಣೆ ನಡೆದು ಹೊಸ ಶಾಸಕರು ಬರುವವರೆಗೆ ಈ ಸಮಸ್ಯೆಗೆ ಪರಿಹಾರ ಸಿಗುವ ಲಕ್ಷಣಗಳು ಸದ್ಯ ಕಾಣುತ್ತಿಲ್ಲ.

ಮಾಜಿ ಸಚಿವ ವಿನಯ ಕುಮಾರ್ ಸೊರಕೆಯ ಅವಧಿಯಲ್ಲಿ ಕಾಪುವಿಗೆ ಅಭಿವೃದ್ದಿಯ ದೃಷ್ಟಿಯಿಂದ ಜಾರಿಗೆ ಬಂದು ಹತ್ತಾರು ಸಾರ್ವಜನಿಕ ಕೆರೆಗಳು -ಇಂಟರ್ಲಾಕ್ – ಕಾಮಗಾರಿಗಳು ನಡೆದಿದ್ದವು ಅದೇ ಸಮಯದಲ್ಲಿ ಚುನಾವಣೆ ಘೋಷಣೆಯಾದ ಪರಿಣಾಮ ಪ್ರಾಧಿಕಾರದಿಂದಾಗಿ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ ಬಿಜೆಪಿ ಶಾಸಕರಿ ಗೆದ್ದು ಬಂದ ಕೂಡಲೇ ಪ್ರಾಧಿಕಾರ ರದ್ದುಗೊಳಿಸುವುದಾಗಿ ಡಂಗುರ ಸಾರಿಸಿ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಕೈವಶ ಮಾಡಿಕೊಂಡು ೨೦೨೩ ನೇ ಸಾಲಿಗೆ ಐದು ವರ್ಷವಾದರೂ ಇದುವರೆಗೆ ಒಂದು ಪೈಸೆಯ ಹೊಸ ಬೆಳವಣಿಗೆ ಕಂಡುಬಂದಿಲ್ಲ ಮತ್ತು ಪ್ರಾಧಿಕಾರದಿಂದ ಹೊಸ ಯೋಜನೆಗಳು ಜಾರಿಗೆ ಬಾರದೇ ಹಿಂದಿನಿಗಿಂತ ಜಾಸ್ತಿ ಸಮಸ್ಯೆಗಳು ಉಧ್ಬವಗೊಂಡಿದೆ.

ಕಳೆದು ಐದು ವರ್ಷದಲ್ಲಿ ಮಾಸ್ಟರ್ ಪ್ಲ್ಯಾನ್ ‍ಝಡ್.ಆರ್.ಆರ್ ಆಗದ ಪರಿಣಾಮವಾಗಿ ಸಾಮಾನ್ಯ ಜನರ ಸಮಸ್ಯೆಗೆ ಮುಕ್ತಿ ದೊರಕದೆ ಪ್ರತಿದಿನ ಬಿಜೆಪಿ ಶಾಸಕರ ಸುಳ್ಳು ಭರವಸೆಗೆ ಹಿಡಿಶಾಪ ಹಾಕುವಂತಾಗಿದೆ.ಈ ಪ್ರಾಧಿಕಾರದಿಂದಾಗಿ ಕಾಪು ಪುರಸಭೆಯ ಸುತ್ತಲಿನ ಪಂಚಾಯತ್ನ ಗ್ರಾಮಸ್ಥರು ಕೂಡ ಬಲಿಯಾಗುತ್ತಿದ್ದು ಆದರೇ ಅಲ್ಲಿನ ಅಧಿಕಾರ ಶಾಹಿ ಪಕ್ಷಗಳು ತಮ್ಮದೇ ಪಕ್ಷದ ಶಾಸಕರ ಪರವಾಗಿ ಬ್ಯಾಟಿಂಗ್ ನಡೆಸುತ್ತಿರುವ ಪರಿಣಾಮವಾಗಿ ತಮ್ಮೂರಿನ ಗ್ರಾಮಸ್ಥರನ್ನು ಪ್ರಾಧಿಕಾರದ ಕೂಪದೊಳಗೆ ದೂಡುವ ಪ್ರಯತ್ನ ನಡೆಸುತ್ತಿರುವುದು ಕೂಡ ಪ್ರಜಾಪ್ರಭುತ್ವ ವ್ಯವಸ್ಥೆಯೊಳಗಿನ ವಿಪರ್ಯಾಸವಾಗಿದೆ.

ನಗರಾಭಿವೃದ್ದಿ ಪ್ರಾಧಿಕಾರ ಪೆಡಂಭೂತ ಎಂದು ಸಾರಿ ಸಾರಿ ಹೇಳುತ್ತಿದ್ದ ಬಿಜೆಪಿ ಶಾಸಕ ಲಾಲಾಜಿ ಆರ್ ಮೆಂಡನ್ ಗೆ ಇವತ್ತಿನವರೆಗೂ ಸಿಬ್ಬಂಧಿ ಕೊರತೆ ನೀಗಿಸಲು ಸಾಧ್ಯವಾಗಿಲ್ಲ ಎಂಬ ಕೂಗು ಕೂಡ ಕೇಳಿ ಬರುತ್ತಿದೆ. ಅಭಿವೃದ್ದಿ ಕಾಣಬೇಕಾಗಿದ್ದ ಕಾಪು ಇದೀಗ ಪ್ರಾಧಿಕಾರದ ಸಮಸ್ಯೆಯಿಂದ ನಲುಗುತ್ತಿದೆ ಸದ್ಯ ಮುಂದಿನ ಚುನಾವಣೆ ನಡೆಯುವವರೆಗೂ ಈ ಸಮಸ್ಯೆಗಳು ಯಥಾಸ್ಥಿತಿ ಕಾಪಾಡಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು ಯಾವುದೇ ಬೆಳವಣಿಗೆಯಾಗಲು ಸಾಧ್ಯವಿಲ್ಲ ಎಂಬುದು ವಾಸ್ತವ ಸಂಗತಿಯಾಗಿದೆ.

https://www.youtube.com/@vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

7 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

8 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

8 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

9 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

9 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago