ಬೆAಗಳೂರು: ರಾಜ್ಯದಲ್ಲಿ ಕುಡಿಯುವ ನೀರು, ಮೇವಿನ ಕೊರತೆ, ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ೨೩೬ ತಾಲ್ಲೂಕುಗಳ ಪೈಕಿ ೨೧೬ ತಾಲೂಕುಗಳು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿವೆ. ೪೨ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯಿಲ್ಲ ಎಂದರು.
ಮುAಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಬಿದ್ದರೆ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಸುವಂತೆ ಸೂಚಿಸಲಾಗಿದೆ. ಮೇವಿನ ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಜನರಿಗೆ ಉದ್ಯೋಗ ನೀಡಲು ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರ ಅಗತ್ಯ ನೆರವು ನೀಡುವ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ೨ ರಿಂದ ಮೂರು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ ಹೀಗಾಗಿ ಲೋಡ್ ಶೆಡ್ಡಿಂಗ್ ಆಗಿದೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆಯೇ ಮಾಡಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ಆದಷ್ಟು ರೈತರಿಗೆ ತೊಂದರೆಯಾಗದAತೆ ವ್ಯವಸ್ಥೆ ಮಾಡುತ್ತೇವೆ. ರೈತರು ನಿರಂತರವಾಗಿ ನಾಲ್ಕು ಗಂಟೆ ತ್ರಿ ಫೇಸ್ ವಿದ್ಯುತ್ ಕೊಟ್ಟರೆ ಸಾಕು ಎಂದು ಹೇಳುತ್ತಿದ್ದಾರೆ. ಎಲ್ಲದರ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…