ಬೆAಗಳೂರು: ರಾಜ್ಯದಲ್ಲಿ ಕುಡಿಯುವ ನೀರು, ಮೇವಿನ ಕೊರತೆ, ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ೨೩೬ ತಾಲ್ಲೂಕುಗಳ ಪೈಕಿ ೨೧೬ ತಾಲೂಕುಗಳು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿವೆ. ೪೨ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯಿಲ್ಲ ಎಂದರು.
ಮುAಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಬಿದ್ದರೆ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಸುವಂತೆ ಸೂಚಿಸಲಾಗಿದೆ. ಮೇವಿನ ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಜನರಿಗೆ ಉದ್ಯೋಗ ನೀಡಲು ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರ ಅಗತ್ಯ ನೆರವು ನೀಡುವ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ೨ ರಿಂದ ಮೂರು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ ಹೀಗಾಗಿ ಲೋಡ್ ಶೆಡ್ಡಿಂಗ್ ಆಗಿದೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆಯೇ ಮಾಡಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ಆದಷ್ಟು ರೈತರಿಗೆ ತೊಂದರೆಯಾಗದAತೆ ವ್ಯವಸ್ಥೆ ಮಾಡುತ್ತೇವೆ. ರೈತರು ನಿರಂತರವಾಗಿ ನಾಲ್ಕು ಗಂಟೆ ತ್ರಿ ಫೇಸ್ ವಿದ್ಯುತ್ ಕೊಟ್ಟರೆ ಸಾಕು ಎಂದು ಹೇಳುತ್ತಿದ್ದಾರೆ. ಎಲ್ಲದರ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…