Featured

ICUನಲ್ಲಿ ಮದುವೆಯಾಗಿ ತಾಯಿಯ ಕೊನೆ ಆಸೆ ನೆರವೇರಿಸಿದ ಮಗಳು , ಮದುವೆ ನೋಡಿ ಕೊನೆಯುಸಿರೆಳೆದ ತಾಯಿ – VIshwanews24

ICUನಲ್ಲಿ ಮದುವೆಯಾಗಿ ತಾಯಿಯ ಕೊನೆ ಆಸೆ ನೆರವೇರಿಸಿದ ಮಗಳು , ಮದುವೆ ನೋಡಿ ಕೊನೆಯುಸಿರೆಳೆದ ತಾಯಿ

ಪಾಟ್ನಾ: ತಾಯಿಯ  ಕೊನೆಯ ಆಸೆ ಪೂರೈಸಲು ಮಗಳೊಬ್ಬಳು ತನ್ನ ಮದುವೆಯನ್ನು  ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಆದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ಪಡೆಯುತ್ತಿದೆ.

ಬಿಹಾರದ ಗಯಾ ನಿವಾಸಿ ಪೂನಂ ಮಗಧ್ ಎಂಬಾಕೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಗಯಾದ ಮ್ಯಾಜಿಸ್ಟ್ರೇಟ್ ಕಾಲೋನಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರಬೇಕು ಎಂದು ವೈದ್ಯರು ಕುಟುಂಬ ಸದಸ್ಯರಿಗೆ ಸೂಚಿಸಿದ್ದರು.

ಆದರೆ ಪೂನಂಗೆ ತನ್ನ ಮಗಳ ಮದುವೆಯನ್ನು ನೋಡಬೇಕು ಎಂಬ ಆಸೆಯಿತ್ತು. ಈ ಹಿನ್ನೆಲೆಯಲ್ಲಿ ಆಕೆ ತನ್ನ ಮಗಳು ಚಾಂದಿನಿ(26) ಬಳಿ ಹೇಳಿಕೊಂಡಿದ್ದಾಳೆ. ತನ್ನ ತಾಯಿಯ ಕೊನೆಯ ಆಸೆಯನ್ನು ಅರಿತ ಚಾಂದಿನಿ ಅದನ್ನು ನೆರವೆರಿಸಲು ಸಿದ್ಧವಾಗಿದ್ದಾಳೆ.

ಚಾಂದಿನಿಗೆ ಈ ಮೊದಲೇ ಸೇಲಂಪುರ ಗ್ರಾಮದ ನಿವಾಸಿ ಸುಮಿತ್ ಗೌರವ್ (28) ನೊಂದಿಗೆ ವಿವಾಹವನ್ನು ನಿಗದಿಪಡಿಸಲಾಗಿತ್ತು. ಅಷ್ಟೇ ಅಲ್ಲದೇ ಇಬ್ಬರ ನಿಶ್ಚಿತಾರ್ಥ ಸಮಾರಂಭಕ್ಕೆ ಡಿ. 26 ರಂದು ದಿನಾಂಕ ನಿಗದಿಯಾಗಿತ್ತು. ಆದರೆ ಪೂನಂ ತನ್ನ ಕೊನೆಯ ಆಸೆಯನ್ನು ಹೇಳಿದಾಗ ಚಾಂದಿನಿ ಆ ವಿಷಯವನ್ನು ಸುಮಿತ್ ಕುಟುಂಬ ಸದಸ್ಯರಿಗೆ ತಿಳಿಸಿದಳು. ಇದಾದ ನಂತರ ಎರಡು ಕುಟುಂಬಗಳ ಪರಸ್ಪರ ಒಪ್ಪಿಗೆ ಮೇರೆಗೆ ಪೂನಂ ಅವರ ಕೊನೆಯ ಆಸೆಯನ್ನು ಈಡೇರಿಸಲು ಆಸ್ಪತ್ರೆಯಲ್ಲಿಯೇ ಮದುವೆಯನ್ನು ಏರ್ಪಡಿಸಲು ನಿರ್ಧರಿಸಿದರು.

ಅದರ ನಂತರ, ಸುಮಿತ್ ಗೌರವ್ ಮತ್ತು ಚಾಂದಿನಿ ಆಸ್ಪತ್ರೆಯ ಐಸಿಯುನಲ್ಲಿ ವಿವಾಹವಾದರು. ಅಲ್ಲಿ ಯಾವುದೇ ಅಲಂಕಾರಗಳಿಲ್ಲದೆ ವಧು-ವರರು ಪರಸ್ಪರ ಹಾರ ಹಾಕಿದರು. ಈ ವೇಳೆ ಎರಡೂ ಕಡೆಯಿಂದ ಎರಡರಿಂದ ನಾಲ್ಕು ಮಂದಿ ಹಾಜರಿದ್ದರು. ಈ ವೇಳೆ ವಧು-ವರರು ತಾಯಿ ಪೂನಂ ಕುಮಾರಿ ವರ್ಮಾ ಅವರಿಂದ ಆಶೀರ್ವಾದ ಪಡೆದರು. ಆದರೆ, ಮದುವೆಯಾದ ಕೆಲವೇ ಗಂಟೆಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಕೊನೆಯುಸಿರೆಳೆದಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

14 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

15 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

15 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

15 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

15 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

16 hours ago