Featured

ICUನಲ್ಲಿ ಮದುವೆಯಾಗಿ ತಾಯಿಯ ಕೊನೆ ಆಸೆ ನೆರವೇರಿಸಿದ ಮಗಳು , ಮದುವೆ ನೋಡಿ ಕೊನೆಯುಸಿರೆಳೆದ ತಾಯಿ – VIshwanews24

ICUನಲ್ಲಿ ಮದುವೆಯಾಗಿ ತಾಯಿಯ ಕೊನೆ ಆಸೆ ನೆರವೇರಿಸಿದ ಮಗಳು , ಮದುವೆ ನೋಡಿ ಕೊನೆಯುಸಿರೆಳೆದ ತಾಯಿ

ಪಾಟ್ನಾ: ತಾಯಿಯ  ಕೊನೆಯ ಆಸೆ ಪೂರೈಸಲು ಮಗಳೊಬ್ಬಳು ತನ್ನ ಮದುವೆಯನ್ನು  ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಆದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ಪಡೆಯುತ್ತಿದೆ.

ಬಿಹಾರದ ಗಯಾ ನಿವಾಸಿ ಪೂನಂ ಮಗಧ್ ಎಂಬಾಕೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಗಯಾದ ಮ್ಯಾಜಿಸ್ಟ್ರೇಟ್ ಕಾಲೋನಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರಬೇಕು ಎಂದು ವೈದ್ಯರು ಕುಟುಂಬ ಸದಸ್ಯರಿಗೆ ಸೂಚಿಸಿದ್ದರು.

ಆದರೆ ಪೂನಂಗೆ ತನ್ನ ಮಗಳ ಮದುವೆಯನ್ನು ನೋಡಬೇಕು ಎಂಬ ಆಸೆಯಿತ್ತು. ಈ ಹಿನ್ನೆಲೆಯಲ್ಲಿ ಆಕೆ ತನ್ನ ಮಗಳು ಚಾಂದಿನಿ(26) ಬಳಿ ಹೇಳಿಕೊಂಡಿದ್ದಾಳೆ. ತನ್ನ ತಾಯಿಯ ಕೊನೆಯ ಆಸೆಯನ್ನು ಅರಿತ ಚಾಂದಿನಿ ಅದನ್ನು ನೆರವೆರಿಸಲು ಸಿದ್ಧವಾಗಿದ್ದಾಳೆ.

ಚಾಂದಿನಿಗೆ ಈ ಮೊದಲೇ ಸೇಲಂಪುರ ಗ್ರಾಮದ ನಿವಾಸಿ ಸುಮಿತ್ ಗೌರವ್ (28) ನೊಂದಿಗೆ ವಿವಾಹವನ್ನು ನಿಗದಿಪಡಿಸಲಾಗಿತ್ತು. ಅಷ್ಟೇ ಅಲ್ಲದೇ ಇಬ್ಬರ ನಿಶ್ಚಿತಾರ್ಥ ಸಮಾರಂಭಕ್ಕೆ ಡಿ. 26 ರಂದು ದಿನಾಂಕ ನಿಗದಿಯಾಗಿತ್ತು. ಆದರೆ ಪೂನಂ ತನ್ನ ಕೊನೆಯ ಆಸೆಯನ್ನು ಹೇಳಿದಾಗ ಚಾಂದಿನಿ ಆ ವಿಷಯವನ್ನು ಸುಮಿತ್ ಕುಟುಂಬ ಸದಸ್ಯರಿಗೆ ತಿಳಿಸಿದಳು. ಇದಾದ ನಂತರ ಎರಡು ಕುಟುಂಬಗಳ ಪರಸ್ಪರ ಒಪ್ಪಿಗೆ ಮೇರೆಗೆ ಪೂನಂ ಅವರ ಕೊನೆಯ ಆಸೆಯನ್ನು ಈಡೇರಿಸಲು ಆಸ್ಪತ್ರೆಯಲ್ಲಿಯೇ ಮದುವೆಯನ್ನು ಏರ್ಪಡಿಸಲು ನಿರ್ಧರಿಸಿದರು.

ಅದರ ನಂತರ, ಸುಮಿತ್ ಗೌರವ್ ಮತ್ತು ಚಾಂದಿನಿ ಆಸ್ಪತ್ರೆಯ ಐಸಿಯುನಲ್ಲಿ ವಿವಾಹವಾದರು. ಅಲ್ಲಿ ಯಾವುದೇ ಅಲಂಕಾರಗಳಿಲ್ಲದೆ ವಧು-ವರರು ಪರಸ್ಪರ ಹಾರ ಹಾಕಿದರು. ಈ ವೇಳೆ ಎರಡೂ ಕಡೆಯಿಂದ ಎರಡರಿಂದ ನಾಲ್ಕು ಮಂದಿ ಹಾಜರಿದ್ದರು. ಈ ವೇಳೆ ವಧು-ವರರು ತಾಯಿ ಪೂನಂ ಕುಮಾರಿ ವರ್ಮಾ ಅವರಿಂದ ಆಶೀರ್ವಾದ ಪಡೆದರು. ಆದರೆ, ಮದುವೆಯಾದ ಕೆಲವೇ ಗಂಟೆಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಕೊನೆಯುಸಿರೆಳೆದಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

18 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

19 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

19 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

19 hours ago