ಪಾಟ್ನಾ: ತಾಯಿಯ ಕೊನೆಯ ಆಸೆ ಪೂರೈಸಲು ಮಗಳೊಬ್ಬಳು ತನ್ನ ಮದುವೆಯನ್ನು ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಆದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ಪಡೆಯುತ್ತಿದೆ.
ಬಿಹಾರದ ಗಯಾ ನಿವಾಸಿ ಪೂನಂ ಮಗಧ್ ಎಂಬಾಕೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಗಯಾದ ಮ್ಯಾಜಿಸ್ಟ್ರೇಟ್ ಕಾಲೋನಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರಬೇಕು ಎಂದು ವೈದ್ಯರು ಕುಟುಂಬ ಸದಸ್ಯರಿಗೆ ಸೂಚಿಸಿದ್ದರು.
ಆದರೆ ಪೂನಂಗೆ ತನ್ನ ಮಗಳ ಮದುವೆಯನ್ನು ನೋಡಬೇಕು ಎಂಬ ಆಸೆಯಿತ್ತು. ಈ ಹಿನ್ನೆಲೆಯಲ್ಲಿ ಆಕೆ ತನ್ನ ಮಗಳು ಚಾಂದಿನಿ(26) ಬಳಿ ಹೇಳಿಕೊಂಡಿದ್ದಾಳೆ. ತನ್ನ ತಾಯಿಯ ಕೊನೆಯ ಆಸೆಯನ್ನು ಅರಿತ ಚಾಂದಿನಿ ಅದನ್ನು ನೆರವೆರಿಸಲು ಸಿದ್ಧವಾಗಿದ್ದಾಳೆ.
ಚಾಂದಿನಿಗೆ ಈ ಮೊದಲೇ ಸೇಲಂಪುರ ಗ್ರಾಮದ ನಿವಾಸಿ ಸುಮಿತ್ ಗೌರವ್ (28) ನೊಂದಿಗೆ ವಿವಾಹವನ್ನು ನಿಗದಿಪಡಿಸಲಾಗಿತ್ತು. ಅಷ್ಟೇ ಅಲ್ಲದೇ ಇಬ್ಬರ ನಿಶ್ಚಿತಾರ್ಥ ಸಮಾರಂಭಕ್ಕೆ ಡಿ. 26 ರಂದು ದಿನಾಂಕ ನಿಗದಿಯಾಗಿತ್ತು. ಆದರೆ ಪೂನಂ ತನ್ನ ಕೊನೆಯ ಆಸೆಯನ್ನು ಹೇಳಿದಾಗ ಚಾಂದಿನಿ ಆ ವಿಷಯವನ್ನು ಸುಮಿತ್ ಕುಟುಂಬ ಸದಸ್ಯರಿಗೆ ತಿಳಿಸಿದಳು. ಇದಾದ ನಂತರ ಎರಡು ಕುಟುಂಬಗಳ ಪರಸ್ಪರ ಒಪ್ಪಿಗೆ ಮೇರೆಗೆ ಪೂನಂ ಅವರ ಕೊನೆಯ ಆಸೆಯನ್ನು ಈಡೇರಿಸಲು ಆಸ್ಪತ್ರೆಯಲ್ಲಿಯೇ ಮದುವೆಯನ್ನು ಏರ್ಪಡಿಸಲು ನಿರ್ಧರಿಸಿದರು.
ಅದರ ನಂತರ, ಸುಮಿತ್ ಗೌರವ್ ಮತ್ತು ಚಾಂದಿನಿ ಆಸ್ಪತ್ರೆಯ ಐಸಿಯುನಲ್ಲಿ ವಿವಾಹವಾದರು. ಅಲ್ಲಿ ಯಾವುದೇ ಅಲಂಕಾರಗಳಿಲ್ಲದೆ ವಧು-ವರರು ಪರಸ್ಪರ ಹಾರ ಹಾಕಿದರು. ಈ ವೇಳೆ ಎರಡೂ ಕಡೆಯಿಂದ ಎರಡರಿಂದ ನಾಲ್ಕು ಮಂದಿ ಹಾಜರಿದ್ದರು. ಈ ವೇಳೆ ವಧು-ವರರು ತಾಯಿ ಪೂನಂ ಕುಮಾರಿ ವರ್ಮಾ ಅವರಿಂದ ಆಶೀರ್ವಾದ ಪಡೆದರು. ಆದರೆ, ಮದುವೆಯಾದ ಕೆಲವೇ ಗಂಟೆಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಕೊನೆಯುಸಿರೆಳೆದಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…