Featured

IPS ಅಧಿಕಾರಿ ಎಂದು ನಂಬಿಸಿ 12ಕ್ಕೂ ಹೆಚ್ಚು ಮಹಿಳೆಯರಿಗೆ ಮೋಸ ಮಾಡಿ ಲಕ್ಷ ಲಕ್ಷ ಹಣ ದೋಚಿದ ಖದೀಮ – Vishwanews24

IPS ಅಧಿಕಾರಿ ಎಂದು ನಂಬಿಸಿ 12ಕ್ಕೂ ಹೆಚ್ಚು ಮಹಿಳೆಯರಿಗೆ ಮೋಸ ಮಾಡಿ ಲಕ್ಷ ಲಕ್ಷ ಹಣ ದೋಚಿದ ಖದೀಮ

ನವದೆಹಲಿ: ಓದಿದ್ದು 8ನೇ ತರಗತಿ, ಆದರೂ ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 12ಕ್ಕೂ ಹೆಚ್ಚು ಮಹಿಳೆಯರಿಗೆ  ಮೋಸ ಮಾಡಿ ಲಕ್ಷಾಂತರ ಹಣ ಕೊಳ್ಳೆ ಹೊಡೆದ ಘಟನೆ ದೆಹಲಿಯಲ್ಲಿ ನಡೆದಿದೆ.

ವಿಕಾಸ್ ಗೌತಮ್ ಬಂಧಿತ ಆರೋಪಿ. ಈತ ವಿಕಾಸ್ ಯಾದವ್ ಎಂಬ ಹೆಸರಿನಲ್ಲಿ ಟ್ವಿಟ್ಟರ್, ಇನ್‍ಸ್ಟಾಗ್ರಾಮ್ ಹಾಗೂ ಫೇಸ್‍ಬುಕ್‍ನಲ್ಲಿ ನಕಲಿ ಖಾತೆಯನ್ನು ರಚಿಸಿದ್ದ. ಅಷ್ಟೇ ಅಲ್ಲದೇ ಖಾತೆಯನ್ನು ಅಧಿಕೃತ ಎಂದು ತೊರಿಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದ. ತಾನು ಸರ್ಕಾರಿ ಅಧಿಕಾರಿ ಎಂದು ಹೇಳಲು ಸರ್ಕಾರಿ ಕಾರಿನ ಮುಂದೆ ನಿಂತು ಪೋಸ್ ನೀಡಿದ್ದ.

ಅದಾದ ಬಳಿಕ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯೆಯೊಬ್ಬಳು ಆನ್‍ಲೈನ್‍ನಲ್ಲಿ ಪರಿಚಯವಾಗಿದ್ದಳು. ಪ್ರತಿದಿನ ಅವಳೊಂದಿಗೆ ಚಾಟ್ ಮಾಡಿ, ಅವಳನ್ನು ತಾನು ಸರ್ಕಾರಿ ಅಧಿಕಾರಿ ಎಂದು ನಂಬಿಸಿದ್ದಾನೆ. ಅಷ್ಟೇ ಅಲ್ಲದೇ ಆತ ವೈದ್ಯೆಯಿಂದ 25,000 ರೂ.ಯನ್ನು ಪಡೆದಿದ್ದಾನೆ. ಆದರೆ ವೈದ್ಯೆಗೆ ಈತ ಮೋಸ ಮಾಡುತ್ತಿದ್ದಾನೆ ಎಂದು ಸಂಶಯ ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯೆ ಪೊಲೀಸರ ಬಳಿ ಹೋಗಲು ನಿರ್ಧರಿಸಿದ್ದಾಳೆ. ಆದರೆ ವಿಕಾಸ್ ತನಗೆ ರಾಜಕೀಯ ನಾಯಕರ ಸಂಪರ್ಕವಿದೆ ಎಂದು ಬೆದರಿಕೆ ಹಾಕಿದ್ದಾನೆ.

ಅದಕ್ಕೂ ಹೆದರದ ವೈದ್ಯೆ ಪೊಲೀಸರಿಗೆ ದೂರು ನೀಡಿದ್ದಾಳೆ. ಮಹಿಳೆಯ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ವಿಕಾಸ್ ಇದೇ ರೀತಿ ಹೇಳಿಕೊಂಡು ಹತ್ತಾರು ಮಹಿಳೆಯರ ಬಳಿ ಲಕ್ಷಾಂತರ ರೂ. ವಂಚಿಸಿದ್ದಾನೆ ಎಂಬ ವಿಷಯ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿ ವಿಕಾಸ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಈತ ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ. 8ನೇ ತರಗತಿ ಉತ್ತೀರ್ಣರಾದ ನಂತರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೆಲವು ವೆಲ್ಡಿಂಗ್ ಕೋರ್ಸ್ ಮಾಡಿದ್ದ. ಅದಾದ ಬಳಿಕ ವಿಕಾಸ್ ನಾಗರಿಕ ಸೇವಾ ಪರೀಕ್ಷಾ ಕೋಚಿಂಗ್ ಕೇಂದ್ರಗಳ ಕೇಂದ್ರವಾದ ಉತ್ತರ ದೆಹಲಿಯ ಮುಖರ್ಜಿ ನಗರದ ರೆಸ್ಟೋರೆಂಟ್‍ನಲ್ಲಿಯೂ ಕೆಲಸ ಮಾಡುತ್ತಿದ್ದ. ಆ ಪ್ರದೇಶದಲ್ಲಿ ನಾಗರಿಕ ಸೇವೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ನೋಡಿ, ತಾನೂ ಐಪಿಎಸ್ ಅಧಿಕಾರಿಯಂತೆ ನಟಿಸುವ ಆಲೋಚನೆ ಬಂದಿದೆ ಎಂಬುದನ್ನು ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾನೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago