Featured

ISROದಿಂದ PSLV-C62 ಮೂಲಕ 16 ಉಪಗ್ರಹಗಳ ಯಶಸ್ವಿ ಉಡಾವಣೆ – vishwanews24

ISROದಿಂದ PSLV-C62 ಮೂಲಕ 16 ಉಪಗ್ರಹಗಳ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) 16 ಉಪಗ್ರಹಗಳನ್ನು ಹೊತ್ತೊಯ್ದ PSLV-C62 ರಾಕೆಟನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ 2026ರ ಮೊದಲ ಉಡಾವಣೆಗೆ ಚಾಲನೆ ನೀಡಿದೆ.

ಸೋಮವಾರ ಬೆಳಿಗ್ಗೆ 10.18ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ನಡೆದಿದ್ದು, ಇದು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ (PSLV)ನ 64ನೇ ಹಾರಾಟವಾಗಿದೆ.

ಇಸ್ರೋ ಅಧಿಕಾರಿಗಳ ಪ್ರಕಾರ, ಭಾರತದ ಭೂ ವೀಕ್ಷಣಾ ಸಾಮರ್ಥ್ಯಗಳನ್ನು ಗಣನೀಯವಾಗಿ ಹೆಚ್ಚಿಸಲು EOS-N1 ಅನ್ನು ವಿನ್ಯಾಸಗೊಳಿಸಲಾಗಿದೆ. ಕೃಷಿ ಮೇಲ್ವಿಚಾರಣೆ, ನಗರಾಭಿವೃದ್ಧಿ, ಮೂಲಸೌಕರ್ಯ ಯೋಜನೆ, ಪರಿಸರ ಮೌಲ್ಯಮಾಪನ ಮತ್ತು ವಿಪತ್ತು ನಿರ್ವಹಣೆ ಸೇರಿದಂತೆ ಅನ್ವಯಿಕೆಗಳಿಗೆ ಈ ಉಪಗ್ರಹವು ಹೆಚ್ಚಿನ ರೆಸಲ್ಯೂಶನ್ ಡೇಟಾವನ್ನು ಒದಗಿಸುತ್ತದೆ. ಪ್ರವಾಹ, ಭೂಕುಸಿತ ಮತ್ತು ಚಂಡಮಾರುತಗಳಂತಹ ನೈಸರ್ಗಿಕ ವಿಕೋಪಗಳ ಸಮಯದಲ್ಲಿ EOS-N1 ನೈಜ-ಸಮಯದ ಮೇಲ್ವಿಚಾರಣೆಯನ್ನು ಬೆಂಬಲಿಸುವ ನಿರೀಕ್ಷೆಯಿದೆ.

ಸುಮಾರು 260 ಟನ್ ತೂಕದ PSLV-C62/DL ರೂಪಾಂತರವು ಎರಡು ಸ್ಟ್ರಾಪ್-ಆನ್ ಬೂಸ್ಟರ್‌ಗಳನ್ನು ಹೊಂದಿದ್ದು, DRDOನ ಕಡಲ ಕಣ್ಗಾವಲು ಮತ್ತು ಭೂ ವೀಕ್ಷಣಾ ಅಗತ್ಯಗಳಿಗಾಗಿ ಅಭಿವೃದ್ಧಿಪಡಿಸಲಾದ ಪ್ರಾಥಮಿಕ EOS-N1 (ಅನ್ವೇಶಾ) ಉಪಗ್ರಹವನ್ನು ಹೊತ್ತೊಯ್ದಿತು.

ಇದರೊಂದಿಗೆ, ಭಾರತೀಯ ಸ್ಟಾರ್ಟ್‌ಅಪ್‌ಗಳು, ವಿಶ್ವವಿದ್ಯಾಲಯಗಳು ಹಾಗೂ ಅಂತರರಾಷ್ಟ್ರೀಯ ಪಾಲುದಾರರಿಂದ ಬಂದ 15 ಸಹ-ಪ್ರಯಾಣಿಕ ಉಪಗ್ರಹಗಳನ್ನು ಸೇರಿಸಿ ಒಟ್ಟು 16 ಉಪಗ್ರಹಗಳನ್ನು ಭೂಮಿಯಿಂದ ಸುಮಾರು 200 ರಿಂದ 500 ಕಿಲೋಮೀಟರ್ ಎತ್ತರದ ಸೂರ್ಯ-ಸಿಂಕ್ರೊನಸ್ ಧ್ರುವ ಕಕ್ಷೆಗೆ ಕಳುಹಿಸಲಾಗಿದೆ. ಸ್ಪೇನ್‌ನ ಕೆಸ್ಟ್ರೆಲ್ ಇನಿಶಿಯಲ್ ಡೆಮಾನ್‌ಸ್ಟ್ರೇಟರ್ (KID) ಸೇರಿದಂತೆ ಮರುಬಳಕೆ ತಾಂತ್ರಿಕ ಪ್ರಯೋಗಗಳಿಗೆ ಸಂಬಂಧಿಸಿದ ಉಪಗ್ರಹಗಳೂ ಈ ಮಿಷನ್‌ನಲ್ಲಿ ಸೇರಿವೆ. ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL) ನಿರ್ವಹಣೆಯಲ್ಲಿನ ಇದು ಒಂಭತ್ತನೇ ವಾಣಿಜ್ಯ ರೈಡ್‌ ಶೇರ್ ಉಡಾವಣೆಯಾಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago