JDS ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾಗುವ ಹುಡುಗಿಯರಿಗೆ 2 ಲಕ್ಷ ಪ್ರೋತ್ಸಾಹ ಧನ : ಕುಮಾರಸ್ವಾಮಿ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾಗುವ ಹುಡುಗಿಯರಿಗೆ 2 ಲಕ್ಷ ಪ್ರೋತ್ಸಾಹ ಧನ : ಕುಮಾರಸ್ವಾಮಿ ಘೋಷಣೆ

ಮುಂಬರುವ ಚುನಾವಣೆಗೆ ರಾಜ್ಯದ ಪ್ರಮುಖ ಪಕ್ಷಗಳು ವಿವಿಧ ಭರವಸೆಗಳನ್ನು ತಮ್ಮ ಪ್ರಣಾಳಿಕೆಯಲ್ಲಿ ನೀಡುತ್ತಿದ್ದಾರೆ. ರೈತರ ಮಗ ಎಂದೇ ಹೆಸರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಂಬರುವ ವರ್ಷ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರೈತರ ಮಕ್ಕಳನ್ನು ಮದುವೆಯಾಗುವ ಹುಡುಗಿಯರಿಗೆ ಎರಡು ಲಕ್ಷ ಪ್ರೋತ್ಸಾಹ ಧನ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಭರವಸೆ.
ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ಒಂದೊಂದು ಊರಲ್ಲಿ 50 ರಿಂದ 100 ಗಂಡುಗಳು ಮದುವೆಗೆ ವಧು ಸಿಗದೇ ಕಾಯುತ್ತಿದ್ದಾರೆ.

ಉಡುಪಿ: ವಿವಾದ ಎಬ್ಬಿಸಿ ಮುಸ್ಲಿಮ್ ಮತ ಸಂಪಾದಿಸಲು ಇಂತಹ ಅಸಹ್ಯ ಹೇಳಿಕೆ : ಮಿಥುನ್ ರೈ ಗೆ ಪ್ರಮೋದ್ ಮುತಾಲಿಕ್ – Vishwanews24

ಪ್ರೋತ್ಸಾಹ ಧನ ನೀಡುವುದರಿಂದ ರಾಜ್ಯದ ಬೊಕ್ಕಸಕ್ಕೆ ಎಷ್ಟು ಹಣ ಖರ್ಚಾಗುತ್ತದೆ ಎಂದು ಲೆಕ್ಕ ಹಾಕಲಾಗಿದೆ ಎಂದ ಕುಮಾರಸ್ವಾಮಿ.
ತುಮಕೂರು: ರೈತರ ಮಕ್ಕಳ ಮದುವೆಯಾಗಲು ವಧುಗಳು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಭರ್ಜರಿ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದಲ್ಲಿ ಬುಧವಾರ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ಒಂದೊಂದು ಊರಲ್ಲಿ 50 ರಿಂದ 100 ಗಂಡು ಮಕ್ಕಳು ಹುಡುಗಿ ಸಿಗದೇ ಕಾಯುತ್ತಿದ್ದಾರೆ. ಹೆಣ್ಣು ಸಿಗಲಿಲ್ಲ ಎಂದು ನಿರಾಸರಾಗಿದ್ದಾರೆ. ಹೀಗಾಯೇ ಸೂಕ್ತ ತೀರ್ಮಾನ ಕೈಗೊಂಡು ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಎರಡು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದರು.

ಪಡುಬಿದ್ರಿ : ದಟ್ಟ ಆಲದ ಮರದ ಕೆಳಗೆ ಎರಡು ಬೃಹತ್ ಗಾತ್ರದ ವೀರಗಲ್ಲು – Vishwanews24

Leave a Reply