Featured

JDS ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾಗುವ ಹುಡುಗಿಯರಿಗೆ 2 ಲಕ್ಷ ಪ್ರೋತ್ಸಾಹ ಧನ : ಕುಮಾರಸ್ವಾಮಿ ಘೋಷಣೆ – Vishwanews24

ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾಗುವ ಹುಡುಗಿಯರಿಗೆ 2 ಲಕ್ಷ ಪ್ರೋತ್ಸಾಹ ಧನ : ಕುಮಾರಸ್ವಾಮಿ ಘೋಷಣೆ

ಮುಂಬರುವ ಚುನಾವಣೆಗೆ ರಾಜ್ಯದ ಪ್ರಮುಖ ಪಕ್ಷಗಳು ವಿವಿಧ ಭರವಸೆಗಳನ್ನು ತಮ್ಮ ಪ್ರಣಾಳಿಕೆಯಲ್ಲಿ ನೀಡುತ್ತಿದ್ದಾರೆ. ರೈತರ ಮಗ ಎಂದೇ ಹೆಸರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಂಬರುವ ವರ್ಷ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರೈತರ ಮಕ್ಕಳನ್ನು ಮದುವೆಯಾಗುವ ಹುಡುಗಿಯರಿಗೆ ಎರಡು ಲಕ್ಷ ಪ್ರೋತ್ಸಾಹ ಧನ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಭರವಸೆ.
ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ಒಂದೊಂದು ಊರಲ್ಲಿ 50 ರಿಂದ 100 ಗಂಡುಗಳು ಮದುವೆಗೆ ವಧು ಸಿಗದೇ ಕಾಯುತ್ತಿದ್ದಾರೆ.

ಪ್ರೋತ್ಸಾಹ ಧನ ನೀಡುವುದರಿಂದ ರಾಜ್ಯದ ಬೊಕ್ಕಸಕ್ಕೆ ಎಷ್ಟು ಹಣ ಖರ್ಚಾಗುತ್ತದೆ ಎಂದು ಲೆಕ್ಕ ಹಾಕಲಾಗಿದೆ ಎಂದ ಕುಮಾರಸ್ವಾಮಿ.
ತುಮಕೂರು: ರೈತರ ಮಕ್ಕಳ ಮದುವೆಯಾಗಲು ವಧುಗಳು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಭರ್ಜರಿ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದಲ್ಲಿ ಬುಧವಾರ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ಒಂದೊಂದು ಊರಲ್ಲಿ 50 ರಿಂದ 100 ಗಂಡು ಮಕ್ಕಳು ಹುಡುಗಿ ಸಿಗದೇ ಕಾಯುತ್ತಿದ್ದಾರೆ. ಹೆಣ್ಣು ಸಿಗಲಿಲ್ಲ ಎಂದು ನಿರಾಸರಾಗಿದ್ದಾರೆ. ಹೀಗಾಯೇ ಸೂಕ್ತ ತೀರ್ಮಾನ ಕೈಗೊಂಡು ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಎರಡು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago