Karnataka Budget – ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಅಲ್ಲ: ಸಿಎಂ- Vishwanews24
Karnataka Budget – ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಅಲ್ಲ: ಸಿಎಂ
ಬೆಂಗಳೂರು,: 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದ ಅವರು ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದರು.
ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದ ಅವರು, ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿ “ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ. ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ” ಎಂದು ಹೇಳಿದರು.
Karnataka Budget – ಮದ್ಯ ಪ್ರಿಯರಿಗೆ ಶಾಕ್ : ರಾಜ್ಯ ಬಜೆಟ್ನಲ್ಲಿ ಮದ್ಯದರ ಹೆಚ್ಚಳ – Vishwanews24
ಈ 5 ಗ್ಯಾರಂಟಿ ಜಾರಿಯಿಂದ ಇಡೀ ಜಗತ್ತು ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 5 ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳ್ತಿದ್ದಾರೆ. ಕೇಂದ್ರ ಸರ್ಕಾರ ಮಾಡದ್ದನ್ನು ನಾವು ಮಾಡಿದ್ದೇವೆ. ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ರಾಜ್ಯ ಅಭಿವೃದ್ಧಿ ಮಾಡುತ್ತೇವೆ ತೆರಿಗೆ ಸಂಗ್ರಹದಲ್ಲಿ ರಾಜ್ಯವು ಮುಂಚೂಣಿಯಲ್ಲಿದ್ದು, ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳವಾಗಿದೆ. ಇದರ ಪರಿಣಾಮ ತೆರಿಗೆ ಸಂಗ್ರಹ ಹೆಚ್ಚಾಗಲಿದೆ ಎಂದು ಹೇಳಿದರು.
