Featured

Karnataka Budget : ‘ಕಿಸಾನ್ ಕ್ರೆಡಿಟ್ ಕಾರ್ಡ್’ ಹೊಂದಿರುವ ರೈತರಿಗೆ  ಹೆಚ್ಚುವರಿಯಾಗಿ ’10 ಸಾವಿರ ರೂ ಸಹಾಯಧನ’ ನೀಡಿಕೆ – Vishwanews24

Karnataka Budget : ‘ಕಿಸಾನ್ ಕ್ರೆಡಿಟ್ ಕಾರ್ಡ್’ ಹೊಂದಿರುವ ರೈತರಿಗೆ  ಹೆಚ್ಚುವರಿಯಾಗಿ ’10 ಸಾವಿರ ರೂ ಸಹಾಯಧನ’ ನೀಡಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸುತ್ತಿರುವಂತ ಬಜೆಟ್ ನಲ್ಲಿ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ರೈತರಿಗೆ ನೀಡುತ್ತಿರುವಂತ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುತ್ತಿರೋದಾಗಿ ಘೋಷಿಸಿದ್ದಾರೆ.

ಈ ವರ್ಷದಿಂದ ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಗಳಿಗೆ ಹೆಚ್ಚಿಸಲಾಗುವುದು. ಇದರಿಂದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಲಿದೆ ಎಂದರು.

ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತೆ ಸಾಲ ಹೆಚ್ಚಳದಿಂದ ರೈತರಿಗೆ ಆಗಲಿದೆ. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ತರಿಗೆ 25,000 ಕೋಟಿ ರೂಗಳಷ್ಟು ಸಾಲ ವಿತರಿಸಲಾಗುವುದು ಎಂದರು.

ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ ಗಳ ಹೆಚ್ಚುವರಿ ಸಹಾಯ ಧನ ನೀಡಲು ನಿರ್ಧರಿಸಿದ್ದೇವೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ ಹಾಗೂ ನಬಾರ್ಡ್ ನ 7,500 ರೂ ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

22 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

22 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

24 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

24 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago