Featured

Karnataka Budget : ‘ಕಿಸಾನ್ ಕ್ರೆಡಿಟ್ ಕಾರ್ಡ್’ ಹೊಂದಿರುವ ರೈತರಿಗೆ  ಹೆಚ್ಚುವರಿಯಾಗಿ ’10 ಸಾವಿರ ರೂ ಸಹಾಯಧನ’ ನೀಡಿಕೆ – Vishwanews24

Karnataka Budget : ‘ಕಿಸಾನ್ ಕ್ರೆಡಿಟ್ ಕಾರ್ಡ್’ ಹೊಂದಿರುವ ರೈತರಿಗೆ  ಹೆಚ್ಚುವರಿಯಾಗಿ ’10 ಸಾವಿರ ರೂ ಸಹಾಯಧನ’ ನೀಡಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸುತ್ತಿರುವಂತ ಬಜೆಟ್ ನಲ್ಲಿ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ರೈತರಿಗೆ ನೀಡುತ್ತಿರುವಂತ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುತ್ತಿರೋದಾಗಿ ಘೋಷಿಸಿದ್ದಾರೆ.

ಈ ವರ್ಷದಿಂದ ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಗಳಿಗೆ ಹೆಚ್ಚಿಸಲಾಗುವುದು. ಇದರಿಂದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಲಿದೆ ಎಂದರು.

ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತೆ ಸಾಲ ಹೆಚ್ಚಳದಿಂದ ರೈತರಿಗೆ ಆಗಲಿದೆ. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ತರಿಗೆ 25,000 ಕೋಟಿ ರೂಗಳಷ್ಟು ಸಾಲ ವಿತರಿಸಲಾಗುವುದು ಎಂದರು.

ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ ಗಳ ಹೆಚ್ಚುವರಿ ಸಹಾಯ ಧನ ನೀಡಲು ನಿರ್ಧರಿಸಿದ್ದೇವೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ ಹಾಗೂ ನಬಾರ್ಡ್ ನ 7,500 ರೂ ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

17 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

17 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

17 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

18 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

18 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

20 hours ago