Featured

Karnataka Budget – ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಅಲ್ಲ: ಸಿಎಂ- Vishwanews24

Karnataka Budget – ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಅಲ್ಲ: ಸಿಎಂ

ಬೆಂಗಳೂರು,: 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದ ಅವರು ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದರು.

ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದ ಅವರು, ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿ “ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ. ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ” ಎಂದು ಹೇಳಿದರು.

ಈ 5 ಗ್ಯಾರಂಟಿ ಜಾರಿಯಿಂದ ಇಡೀ ಜಗತ್ತು ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 5 ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳ್ತಿದ್ದಾರೆ. ಕೇಂದ್ರ ಸರ್ಕಾರ ಮಾಡದ್ದನ್ನು ನಾವು ಮಾಡಿದ್ದೇವೆ. ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ರಾಜ್ಯ ಅಭಿವೃದ್ಧಿ ಮಾಡುತ್ತೇವೆ ತೆರಿಗೆ ಸಂಗ್ರಹದಲ್ಲಿ ರಾಜ್ಯವು ಮುಂಚೂಣಿಯಲ್ಲಿದ್ದು, ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳವಾಗಿದೆ. ಇದರ ಪರಿಣಾಮ ತೆರಿಗೆ ಸಂಗ್ರಹ ಹೆಚ್ಚಾಗಲಿದೆ ಎಂದು ಹೇಳಿದರು.

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

12 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

12 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

12 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

12 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

13 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

13 hours ago