ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿ ಹಾಗೂ ಅದರಂತೆ ವೇತನ ಪರಿಷ್ಕರಣೆ ಬಗ್ಗೆ ಎದುರು ನೋಡುತ್ತಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ರಾಜ್ಯ ಬಜೆಟ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಆ ಬಗ್ಗೆ ಮುಂದೆ ಓದಿ.
ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿಯಲ್ಲಿ 7214 ಸಂಸ್ಥೆಗಳ ಶಾಸನಬದ್ಧ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದರು.
ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ ಎಂದರು.
ಈ ವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಒಟ್ಟಾರೆ 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳ್ನು ವಿಲೇವಾರಿ ಮಾಡಲಾಗಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತ್ರ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…