ಇದೀಗ ಜಾನುವಾರುಗಳಿಗೆ ಹೆಚ್ಚು ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದೆ.
ಹೀಗಾಗಿ ಇದನ್ನ ತಡೆಗಟ್ಟುವ ಸಲುವಾಗಿ 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ನೀಡಲಾಗುವುದು ಎಂದರು. ಈ ಸೋಂಕಿನಿಂದಾಗಿ ಮರಣ ಹೊಂದಿದ ರಾಸುಗಳ ಮಾಲೀಕರಿಗೆ ಪರಿಹಾರವಾಗಿ 55 ಕೋಟಿ ರೂ. ಮಂಜೂರು ಮಾಡಲಾಗಿದೆ.
ಗ್ರಾಮೀಣ ವಿದ್ಯಾರ್ಥಿಗಳಿಗೆ ಹಳ್ಳಿ ಮುತ್ತು ಯೋಜನೆ, ಗ್ರಾಮೀಣಾ ಭಾಗದ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ, ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸಹಾಯ, ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೆರವು ನೀಡಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಂಪೂರ್ಣ ಶುಲ್ಕ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ ಗಳ ಸಹಾಯ ಧನವನ್ನು ಡಿಬಿಟಿ ಮೂಲಕ ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಸತಿ ಯೋಜನೆಗಳಲ್ಲಿ ಘಟಕ ಸಹಾಯಧನ 1.75 ಲಕ್ಷದಿಂದ 2 ಲಕ್ಷ ರೂಗಳಿಗೆ ಹೆಚ್ಚಳ ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
2023-24 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಯನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಮಠ ಮತ್ತು ಮಂದಿರಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲಾಗಿದೆ. ಈಗಾಗಲೇ ಮಠ-ಮಂದಿರಗಳ ಅಭಿವೃದ್ಧಿಗೆ ಬಜೆಟ್ನಲ್ಲಿ 1,000 ಕೋಟಿ ರೂ. ಹಣ ಮೀಸಲಿರಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೊದಲ ಬಾರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಸ್ವಯಂಉದ್ಯೋಗ ಕೈಗೊಳ್ಳಲು ವಿದ್ಯುತ್ ಚಾಲಿತ ತ್ರಿಚಕ್ರ ಸರಕು ವಾಹನ ಖರೀದಿಗೆ 50 ಸಾವಿರ ರೂ. ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಮುಂದುವರೆಸಿ ಬಾಬು ಜಗಜೀವನರಾಮ್ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಎಲೆಕ್ರಿಕ್ ತಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳನ್ನು ಖರೀದಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಫಲಾನುಭವಿಗಳಿಗೆ ಶೇ.50 ರಷ್ಟು 2 ಲಕ್ಷ ರೂ. ವರೆಗೂ ಸಹಾಯಧನವನ್ನು ನೀಡಲಾಗುವುದು, ಇದಕ್ಕಾಗಿ 400 ಕೋಟಿ ರೂ. ವೆಚ್ಚವಾಗಲಿದೆ ಎಂದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…